‘ಭೂ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯಲ್ಲಿ ಜಮೀನಿಗೆ ಅತ್ಯಂತ ಕಡಿಮೆ ಬೆಲೆ ನಿಗದಿ ಮಾಡಿ ಕೆಲವರಿಗೆ ಅವಾರ್ಡ್ ನೀಡುತ್ತಿರುವುದು ಖಂಡನೀಯ. ಶಾಸಕರು, ಸಂಸದರು, ಲಿಂಗಸುಗೂರು ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ, ಎನ್ಎಚ್ ಅಧಿಕಾರಿಗಳು ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ಸೂಕ್ತ ನ್ಯಾಯ ಹಾಗೂ ಪರಿಹಾರ ಒದಗಿಸಲು ಕ್ರಮವಹಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟಕ್ಕೆ ಮುಂದಾಗಬೇಕಾಗುತ್ತದೆ’ ಎಂದು ಎಚ್ಚರಿಸಿದರು.