<p><strong>ರಾಯಚೂರು:</strong> ನಗರದ ನವೋಯ ಎಜ್ಯುಕೇಶನ್ ಟ್ರಸ್ಟ್ನಿಂದ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಿಕೊಂಡು, ನವೋದಯ ಎಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡಲಾಗಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ಆರೋಪಿಸಿದ್ದಾರೆ.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಜನವಾಡ ಬಡಾವಣೆ ನಿವಾಸಿಗಳಿಗೆ ಸಂಬಂಧಿಸಿದ ಭೂಮಿಯನ್ನು 2011 ರಲ್ಲಿ ವರ್ಗಾವಣೆ ಮಾಡಲಾಗಿದೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಗರದ ಮಂತ್ರಾಲಯ ರಸ್ತೆ, ಚಂದ್ರಬಂಡಾ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ನೂರಾರು ಎಕರೆ ಭೂಮಿ ದಲಿತರಿಗೆ ಸೇರಿದೆ. ಆದರೆ, ನಕಲಿ ದಾಖಲೆ ಸೃಷ್ಟಿಸಿ ಒಳಗೊಳಗೆ ಭೂಮಿ ಪರಭಾರೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದರು.</p>.<p>ನವೋದಯ ಎಂಜಿನಿಯರಿಂಗ್ ಕಾಲೇಜು 27 ಎಕರೆ 26 ಗುಂಟೆಯಲ್ಲಿ ನಿರ್ಮಿಸಿದ್ದು, ಎಲ್ಲವೂ ದಲಿತರ ಪಿತ್ರಾರ್ಜಿತ ಆಸ್ತಿಯಾಗಿದೆ. ಭೂಮಿಗಾಗಿ ಕಳೆದ 15 ವರ್ಷದಿಂದ ಹೋರಾಟ ನಡೆಸಲಾಗುತ್ತಿದೆ. ಮೊದಲ ಬಾರಿಗೆ ಬಹಿರಂಗವಾಗಿ ಹೋರಾಟ ಆರಂಭಿಸಲಾಗಿದೆ. ಈ ಭೂಮಿಯನ್ನು ಮಾಲೀಕರು ಮಾರಾಟ ಮಾಡಿಲ್ಲ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಈ ಕೂಡಲೇ ಸಮಗ್ರ ತನಿಖೆ ನಡೆಸಬೇಕು. ಎಸ್ಸಿ, ಎಸ್ಟಿ ಆಸ್ತಿ ಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಭೂಮಿ ಕಳೆದುಕೊಂಡಿರುವ ದಲಿತರಿಗೆ ಸೂಕ್ತ ನ್ಯಾಯ ಒದಗಿಸಬೇಕು. ಆಸ್ತಿ ವರ್ಗಾವಣೆಗೆ ಸಹಿ ಮಾಡಿರುವ ಮೂಲ ಮಾಲೀಕರ ಸಹಿಗೂ, ನಕಲಿ ಸಹಿಗೂ ತಾಳೆ ಆಗುತ್ತಿಲ್ಲ. ಈ ಬಗ್ಗೆ ವರದಿಯೊಂದು ಪ್ರಯೋಗಾಲಯದಿಂದ ಬಂದಿದೆ. ಈ ಎಲ್ಲ ದಾಖಲೆಗಳನ್ನು ಆಧರಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಅನಿಲಕುಮಾರ, ರವಿ ದಾದಾಸ, ಶೇಖ್ ಹುಸೇನ್, ಜಿ.ಅಮರೇಶ, ವಿಜಯಕುಮಾರ್, ಜಂಬಲಮ್ಮ, ಪಾಗುಂಟಮ್ಮ, ಮಾರಮ್ಮ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಗರದ ನವೋಯ ಎಜ್ಯುಕೇಶನ್ ಟ್ರಸ್ಟ್ನಿಂದ ಭೂಮಿಯನ್ನು ಅಕ್ರಮವಾಗಿ ವರ್ಗಾಯಿಸಿಕೊಂಡು, ನವೋದಯ ಎಂಜಿನಿಯರಿಂಗ್ ಕಾಲೇಜು ನಿರ್ಮಾಣ ಮಾಡಲಾಗಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ಆರೋಪಿಸಿದ್ದಾರೆ.</p>.<p>ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಜನವಾಡ ಬಡಾವಣೆ ನಿವಾಸಿಗಳಿಗೆ ಸಂಬಂಧಿಸಿದ ಭೂಮಿಯನ್ನು 2011 ರಲ್ಲಿ ವರ್ಗಾವಣೆ ಮಾಡಲಾಗಿದೆ. ಕೂಡಲೇ ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ನಗರದ ಮಂತ್ರಾಲಯ ರಸ್ತೆ, ಚಂದ್ರಬಂಡಾ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿನ ನೂರಾರು ಎಕರೆ ಭೂಮಿ ದಲಿತರಿಗೆ ಸೇರಿದೆ. ಆದರೆ, ನಕಲಿ ದಾಖಲೆ ಸೃಷ್ಟಿಸಿ ಒಳಗೊಳಗೆ ಭೂಮಿ ಪರಭಾರೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದರು.</p>.<p>ನವೋದಯ ಎಂಜಿನಿಯರಿಂಗ್ ಕಾಲೇಜು 27 ಎಕರೆ 26 ಗುಂಟೆಯಲ್ಲಿ ನಿರ್ಮಿಸಿದ್ದು, ಎಲ್ಲವೂ ದಲಿತರ ಪಿತ್ರಾರ್ಜಿತ ಆಸ್ತಿಯಾಗಿದೆ. ಭೂಮಿಗಾಗಿ ಕಳೆದ 15 ವರ್ಷದಿಂದ ಹೋರಾಟ ನಡೆಸಲಾಗುತ್ತಿದೆ. ಮೊದಲ ಬಾರಿಗೆ ಬಹಿರಂಗವಾಗಿ ಹೋರಾಟ ಆರಂಭಿಸಲಾಗಿದೆ. ಈ ಭೂಮಿಯನ್ನು ಮಾಲೀಕರು ಮಾರಾಟ ಮಾಡಿಲ್ಲ ಎಂದು ಹೇಳಿದರು.</p>.<p>ಜಿಲ್ಲಾಧಿಕಾರಿ, ಸಹಾಯಕ ಆಯುಕ್ತರು ಈ ಕೂಡಲೇ ಸಮಗ್ರ ತನಿಖೆ ನಡೆಸಬೇಕು. ಎಸ್ಸಿ, ಎಸ್ಟಿ ಆಸ್ತಿ ಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಭೂಮಿ ಕಳೆದುಕೊಂಡಿರುವ ದಲಿತರಿಗೆ ಸೂಕ್ತ ನ್ಯಾಯ ಒದಗಿಸಬೇಕು. ಆಸ್ತಿ ವರ್ಗಾವಣೆಗೆ ಸಹಿ ಮಾಡಿರುವ ಮೂಲ ಮಾಲೀಕರ ಸಹಿಗೂ, ನಕಲಿ ಸಹಿಗೂ ತಾಳೆ ಆಗುತ್ತಿಲ್ಲ. ಈ ಬಗ್ಗೆ ವರದಿಯೊಂದು ಪ್ರಯೋಗಾಲಯದಿಂದ ಬಂದಿದೆ. ಈ ಎಲ್ಲ ದಾಖಲೆಗಳನ್ನು ಆಧರಿಸಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಅನಿಲಕುಮಾರ, ರವಿ ದಾದಾಸ, ಶೇಖ್ ಹುಸೇನ್, ಜಿ.ಅಮರೇಶ, ವಿಜಯಕುಮಾರ್, ಜಂಬಲಮ್ಮ, ಪಾಗುಂಟಮ್ಮ, ಮಾರಮ್ಮ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>