ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ವಿ ತಾಲ್ಲೂಕಿನ ಸಮಾಜ ಕಲ್ಯಾಣ ಅಧಿಕಾರಿ 2015-16 ಹಾಗೂ 2016-17 ರಲ್ಲಿ ಎಸ್ಸಿಪಿ, ಟಿಎಸ್ಪಿ ಅಡಿ ಸಿಸಿ ರಸ್ತೆ ಕಾಮಗಾರಿ ಮತ್ತು ಶೇ 24.10 ಅನುದಾನದಲ್ಲಿ ಶೈಕ್ಷಣಿಕ ಪ್ರವಾಸ ಮತ್ತು ಶೇ 22.75 ರಲ್ಲಿ ಹಾಸ್ಟೇಲ್ಗಳಿಗೆ ಟ್ರಂಕ್ ಖರೀದಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ದೂರಿದರು.