ಮಸ್ಕಿ ತಾಲ್ಲೂಕಿನ ಹಾಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈಚೆಗೆ ನಡೆದ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಲ್ಬೆಂಡ್ಜೋಲ್ ಮಾತ್ರೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಜಂತುಹುಳು ನಿವಾರಣೆಗೆ ಪ್ರತಿ ಆರು ತಿಂಗಳಿಗೊಮ್ಮೆ ಅಲ್ಬೆಂಡ್ಜೋಲ್ ಮಾತ್ರೆಯನ್ನು ಮಕ್ಕಳಿಗೆ ಕಡ್ಡಾಯವಾಗಿ ನೀಡಬೇಕು. ಜಂತುಹುಳು ಬಾಧೆಯಿಂದ ರಕ್ತಹೀನತೆ ಉಂಟಾದಲ್ಲಿ ಮಕ್ಕಳಲ್ಲಿ ಕಲಿಕಾ ಉತ್ಸಾಹ ಕುಗ್ಗುತ್ತದೆ’ ಎಂದರು.