<p><strong>ಶಕ್ತಿನಗರ: </strong>ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಾಂಪ್ರದಾಯಿಕ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ. ಇದು ಮುಂಗಾರಿನ ಆರಂಭದ ಹಬ್ಬ ಕೂಡ ಹೌದು. ರೈತರು ತಮ್ಮ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ಪೂಜಿಸಿ ಸಂಭ್ರಮಪಡುವ ಈ ಹಬ್ಬ ಕಾರಹುಣ್ಣಿಮೆಯ ನಂತರ ಬರುತ್ತದೆ.</p>.<p>ಕೆಲವರು ಎತ್ತುಗಳನ್ನು ಮನೆಯಲ್ಲಿಯೇ ತಯಾರಿಸಿಕೊಳ್ಳುತ್ತಾರೆ. ಇನ್ನೂ ಕೆಲವರು ಊರ ಕುಂಬಾರರ ಮನೆಗಳಿಂದ ತರುತ್ತಾರೆ.</p>.<p>ಎತ್ತುಗಳನ್ನು ದೇವರ ಜಗುಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಮಣ್ಣೆತ್ತುಗಳನ್ನು ಪೂಜಿಸಿ ಕಾಯಿ–ಕರ್ಪೂರ, ಲೋಬಾನ, ಆರತಿ ಮಾಡಿ ವಿವಿಧ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ ಒಟ್ಟಾಗಿ ಕುಳಿತು ಊಟ ಮಾಡುತ್ತಾರೆ.</p>.<p>ಸಂಜೆ ವೇಳೆಗೆ ಹೊಳೆ, ಕೆರೆ ದಡಕ್ಕೆ ತೆರಳಿ ಮಣ್ಣೆತ್ತುಗಳ ಮುಖ ತೊಳೆದು ವಿಭೂತಿ–ಕುಂಕುಮ ಹಚ್ಚಿ ಆರತಿ ಬೆಳಗಿ, ಮಳೆ ಬೆಳೆ ಸಮೃದ್ಧಿಗೆ ಬೇಡಿಕೊಂಡು ಎತ್ತುಗಳನ್ನು ನೀರಿಗೆ ಬಿಡುವುದು ಪೂರ್ವಜರ ಕಾಲದಿಂದಲೂ ನಡೆದು ಬಂದಿದೆ.</p>.<p>‘ಪೂರ್ವಜರ ಕಾಲದಿಂದಲೂ ಮಣ್ಣೆತ್ತಿನ ಅಮಾವಾಸ್ಯೆ ಆಚರಿಸಿಕೊಂಡು ಬಂದಿದ್ದೇವೆ. ಇದರಿಂದ ಭೂಮಿ ಮತ್ತು ರೈತನಿಗೆ ಬಲ ಬರುತ್ತದೆ. ಎತ್ತುಗಳನ್ನೂ ಗೌರವಿಸಿದಂತೆ ಆಗುತ್ತದೆ’ ಎನ್ನುತ್ತಾರೆ ಶಕ್ತಿನಗರದ ಶಾಂತಾ.</p>.<p>ಮರುದಿನ ಮಕ್ಕಳು ಎತ್ತುಗಳನ್ನು ತೆಗೆದುಕೊಂಡು ಅದರಲ್ಲಿ ಒಂದು ಎತ್ತಿನ ಕಾಲು ಮುರಿದು ತಟ್ಟೆಯಲ್ಲಿಟ್ಟುಕೊಂಡು ಮನೆ ಮನೆಗೆ ತೆರಳಿ ಎಂಟತ್ತಿನ್ಯಾಗ ಒಂದ ಕುಂಟೆತ್ತ ಬಂದೈತಿ ಜ್ವಾಳಾ ನೀಡಿರಿ ಎಂದು ತಿರುಗುತ್ತಾರೆ. ಮನೆಯವರು ಜೋಳ, ಗೋಧಿ, ಸಜ್ಜೆ , ಅಕ್ಕಿ ಹಾಗೂ ಹಣ ನೀಡಿ ಕಳುಹಿಸುತ್ತಾರೆ.</p>.<p>ಸಂಗ್ರಹಿಸಿದ ದವಸ ಧಾನ್ಯಗಳನ್ನು ಊರ ಅಂಗಡಿಗೆ ಹಾಕಿ ಪಂಚ ಪಳಾರ, ಊದಬತ್ತಿ, ಕುಂಕುಮ, ವಿಭೂತಿ, ತೆಂಗಿನಕಾಯಿ, ಬೆಲ್ಲ, ಚುರುಮುರಿ ಖರೀದಿಸುತ್ತಾರೆ. ಎತ್ತುಗಳನ್ನು ತೆಗೆದುಕೊಂಡು ಹೊಳೆ, ಕೆರೆ, ಹಳ್ಳದ ದಡಕ್ಕೆ ತೆರಳಿ ಪೂಜೆ ಮಾಡಿ ಬಿಡುತ್ತಾರೆ. ನಂತರ ದಾರಿಯಲ್ಲಿ ಸಿಕ್ಕವರಿಗೆ ಪಳಾರು ಹಂಚುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ: </strong>ಮಣ್ಣಿನಿಂದ ಎತ್ತುಗಳನ್ನು ಮಾಡಿ ಪೂಜಿಸುವ ಸಾಂಪ್ರದಾಯಿಕ ಹಬ್ಬ ಮಣ್ಣೆತ್ತಿನ ಅಮಾವಾಸ್ಯೆ. ಇದು ಮುಂಗಾರಿನ ಆರಂಭದ ಹಬ್ಬ ಕೂಡ ಹೌದು. ರೈತರು ತಮ್ಮ ಬದುಕಿಗೆ ಆಸರೆಯಾಗಿರುವ ಎತ್ತುಗಳನ್ನು ಪೂಜಿಸಿ ಸಂಭ್ರಮಪಡುವ ಈ ಹಬ್ಬ ಕಾರಹುಣ್ಣಿಮೆಯ ನಂತರ ಬರುತ್ತದೆ.</p>.<p>ಕೆಲವರು ಎತ್ತುಗಳನ್ನು ಮನೆಯಲ್ಲಿಯೇ ತಯಾರಿಸಿಕೊಳ್ಳುತ್ತಾರೆ. ಇನ್ನೂ ಕೆಲವರು ಊರ ಕುಂಬಾರರ ಮನೆಗಳಿಂದ ತರುತ್ತಾರೆ.</p>.<p>ಎತ್ತುಗಳನ್ನು ದೇವರ ಜಗುಲಿ ಮೇಲಿಟ್ಟು ಪೂಜೆ ಮಾಡುತ್ತಾರೆ. ಮಣ್ಣೆತ್ತುಗಳನ್ನು ಪೂಜಿಸಿ ಕಾಯಿ–ಕರ್ಪೂರ, ಲೋಬಾನ, ಆರತಿ ಮಾಡಿ ವಿವಿಧ ಸಿಹಿ ಪದಾರ್ಥಗಳನ್ನು ನೈವೇದ್ಯ ಮಾಡಿ ಒಟ್ಟಾಗಿ ಕುಳಿತು ಊಟ ಮಾಡುತ್ತಾರೆ.</p>.<p>ಸಂಜೆ ವೇಳೆಗೆ ಹೊಳೆ, ಕೆರೆ ದಡಕ್ಕೆ ತೆರಳಿ ಮಣ್ಣೆತ್ತುಗಳ ಮುಖ ತೊಳೆದು ವಿಭೂತಿ–ಕುಂಕುಮ ಹಚ್ಚಿ ಆರತಿ ಬೆಳಗಿ, ಮಳೆ ಬೆಳೆ ಸಮೃದ್ಧಿಗೆ ಬೇಡಿಕೊಂಡು ಎತ್ತುಗಳನ್ನು ನೀರಿಗೆ ಬಿಡುವುದು ಪೂರ್ವಜರ ಕಾಲದಿಂದಲೂ ನಡೆದು ಬಂದಿದೆ.</p>.<p>‘ಪೂರ್ವಜರ ಕಾಲದಿಂದಲೂ ಮಣ್ಣೆತ್ತಿನ ಅಮಾವಾಸ್ಯೆ ಆಚರಿಸಿಕೊಂಡು ಬಂದಿದ್ದೇವೆ. ಇದರಿಂದ ಭೂಮಿ ಮತ್ತು ರೈತನಿಗೆ ಬಲ ಬರುತ್ತದೆ. ಎತ್ತುಗಳನ್ನೂ ಗೌರವಿಸಿದಂತೆ ಆಗುತ್ತದೆ’ ಎನ್ನುತ್ತಾರೆ ಶಕ್ತಿನಗರದ ಶಾಂತಾ.</p>.<p>ಮರುದಿನ ಮಕ್ಕಳು ಎತ್ತುಗಳನ್ನು ತೆಗೆದುಕೊಂಡು ಅದರಲ್ಲಿ ಒಂದು ಎತ್ತಿನ ಕಾಲು ಮುರಿದು ತಟ್ಟೆಯಲ್ಲಿಟ್ಟುಕೊಂಡು ಮನೆ ಮನೆಗೆ ತೆರಳಿ ಎಂಟತ್ತಿನ್ಯಾಗ ಒಂದ ಕುಂಟೆತ್ತ ಬಂದೈತಿ ಜ್ವಾಳಾ ನೀಡಿರಿ ಎಂದು ತಿರುಗುತ್ತಾರೆ. ಮನೆಯವರು ಜೋಳ, ಗೋಧಿ, ಸಜ್ಜೆ , ಅಕ್ಕಿ ಹಾಗೂ ಹಣ ನೀಡಿ ಕಳುಹಿಸುತ್ತಾರೆ.</p>.<p>ಸಂಗ್ರಹಿಸಿದ ದವಸ ಧಾನ್ಯಗಳನ್ನು ಊರ ಅಂಗಡಿಗೆ ಹಾಕಿ ಪಂಚ ಪಳಾರ, ಊದಬತ್ತಿ, ಕುಂಕುಮ, ವಿಭೂತಿ, ತೆಂಗಿನಕಾಯಿ, ಬೆಲ್ಲ, ಚುರುಮುರಿ ಖರೀದಿಸುತ್ತಾರೆ. ಎತ್ತುಗಳನ್ನು ತೆಗೆದುಕೊಂಡು ಹೊಳೆ, ಕೆರೆ, ಹಳ್ಳದ ದಡಕ್ಕೆ ತೆರಳಿ ಪೂಜೆ ಮಾಡಿ ಬಿಡುತ್ತಾರೆ. ನಂತರ ದಾರಿಯಲ್ಲಿ ಸಿಕ್ಕವರಿಗೆ ಪಳಾರು ಹಂಚುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>