ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಿಧೆಡೆ ಅಂಬೇಡ್ಕರ್‌ ಭಾವಚಿತ್ರಕ್ಕೆ ನಮನ

Last Updated 14 ಏಪ್ರಿಲ್ 2020, 16:44 IST
ಅಕ್ಷರ ಗಾತ್ರ

ಸಿರವಾರ: ತಾಲ್ಲೂಕಿನ ವಿವಿಧೆಡೆ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು.

ಪಟ್ಟಣದ ಇಂದಿರಾನಗರದ ಮುಂಭಾಗದಲ್ಲಿನ ಅಂಬೇಡ್ಕರ್ ನಾಮಫಲಕ್ಕೆ ದಲಿತ ಸಂಘಟನೆಗಳಿಂದ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಲಾಯಿತು.

ದಲಿತ ಮುಖಂಡರಾದ ಅಬ್ರಾಹಂ ಹೊನ್ನಟಗಿ, ಜಯಪ್ಪ, ಅಜಿತ್ ಹೊನ್ನಟಗಿ, ಹನುಮಂತ, ಮೌನೇಶ, ಗುಂಡಪ್ಪ ಸೇರಿದಂತೆ ದಲಿತ ಮುಖಂಡರು, ಯುವಕರು ಇದ್ದರು.

ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಪಟ್ಟಣ ಬಸವೇಶ್ವರ ಕಾಲೇಜಿನಲ್ಲಿ ಅಧ್ಯಕ್ಷ ನರಸಿಂಹರಾವ್ ಕುಲಕರ್ಣಿ, ವಿಎಸ್ಎಸ್ಎನ್ ನಲ್ಲಿ ಅಧ್ಯಕ್ಷ ಚನ್ನೂರು ಚನ್ನಬಸವ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡಾ.ಸುನೀಲ್ ಸರೋದೆ ಅಂಬೇಡ್ಕರ್ ಭಾವಚಿತ್ರ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

ಡಾ.ಪರಿಮಳಾ ಮೈತ್ರಿ, ಶ್ರೀದೇವಿ, ಗುರುಪಾದ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.ರವಿ: ಹರವಿ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮದ ಮುಂಖಡ ಬಸನಗೌಡ ದಳಪತಿ ಅಂಬೇಡ್ಕರ್ ನಾಮಫಲಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಅದ್ಯಕ್ಷೆ ಗೌರಮ್ಮ ತಿಮಯ್ಯ ನಾಯಕ, ಎಚ್ ಮರಿಸಿದ್ದಪ್ಪ , ಗೋಪಾಲ ನಾಯಕ ಹರವಿ, ಎಸ್.ಬಸ್ಸಪ್ಪ ಗೌಡ, ಪಂಪಣ್ಣ ತಾತ, ಜೆ.ಮಾರಪ್ಪ, ಬಸವರಾಜ ಶಿಕ್ಷಕ, ಭೀಮಣ್ಣ ನಾಯಕ, ಬಿ‌.ಶಿವರಾಜ ನಾಯಕ, ಬಸಪ್ಪ ಮೇಸ್ತ್ರಿ, ರಾಮಪ್ಪ, ಶರಣಬಸವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT