ಜಯಂತಿ ಆಚರಣೆ ಕುರಿತು ನಡೆದಿದ್ದ ತಾಲ್ಲೂಕು ಆಡಳಿತದ ಪೂರ್ವಭಾವಿ ಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಜಯಂತಿ ಆಚರಿಸಲು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಬುಧವಾರ ಬಾಬು ಜಗಜೀವನರಾಂ ಭಾವಚಿತ್ರ ಇಲ್ಲದೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಗೆ ಮಾತ್ರ ಅಧಿಕಾರಿಗಳು ಮುಂದಾಗಿರುವುದನ್ನು ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಮುಖಂಡ ಪ್ರಭುರಾಜ ಕೊಡ್ಲಿ ಬೆಂಬಲಿಗರ ಜತೆ ಪ್ರತಿಭಟನೆ ನಡೆಸಿದರು.