<p><strong>ಮಾನ್ವಿ: </strong>‘ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಎಲ್ಲಾ ಜಾತಿ ಜನಾಂಗಗಳ ಸಾಮಾಜಿಕ ಪ್ರಗತಿ ಸಾಧ್ಯ’ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯ ಪಿ.ಅನಿಲ್ಕುಮಾರ ಹೇಳಿದರು.</p>.<p>ಪಟ್ಟಣದ ಅಮೃತ ಕಾಲೊನಿಯಲ್ಲಿ ದಲಿತ ಸಮರ ಸೇನೆ ಹಾಗೂ ಕರ್ನಾಟಕ ಸ್ಲಂ ಜನರ ಕ್ರಿಯಾ ವೇದಿಕೆ ಜಂಟಿಯಾಗಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, ‘ ಅಂಬೇಡ್ಕರ್ ಅವರ ಹೋರಾಟ ಹಾಗೂ ಪರಿಶ್ರಮದಿಂದ ದೇಶದ ಎಲ್ಲಾ ಶೋಷಿತ ಸಮುದಾಯಗಳು ಏಳಿಗೆ ಹೊಂದಲು ಸಾಧ್ಯವಾಗಿದೆ’ ಎಂದರು.</p>.<p>ಮುಖಂಡರಾದ ಯಲ್ಲಪ್ಪ ಬಾದರದಿನ್ನಿ, ಜೆ.ರವಿಕುಮಾರ್ ವಕೀಲ, ಪತ್ರಕರ್ತ ಆನಂದಸ್ವಾಮಿ ನಕ್ಕುಂದಿ ಹಾಗೂ ರಾಜ್ಯ ಲಲಿತಕಲಾ ಅಕಾಡೆಮಿ ಮಾಜಿ ಸದಸ್ಯ ವಾಜೀದ್ ಸಾಜಿದ್ ಮಾತನಾಡಿದರು.</p>.<p>ಜಿಲ್ಲಾ ದಲಿತ ಸಮರ ಸೇನೆಯ ಅಧ್ಯಕ್ಷ್ಷ ಅನಿಲ್ ನೀಲಕಂಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ ಮದ್ಲಾಪೂರ. ಬಸವರಾಜ ನಿಲೋಗಲ್, ಅಲ್ಲಮಪ್ರಭು ಕವಿತಾಳ, ಕರಿಯಪ್ಪ, ಪ್ರಕಾಶ್, ಶ್ರೀನಿವಾಸ್ ರೆಡ್ಡಿ ಮೌನೇಶ್, ಶರಣಪ್ಪ, ಮೋದಿನ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: </strong>‘ಶೈಕ್ಷಣಿಕ ಅಭಿವೃದ್ಧಿಯಿಂದ ಮಾತ್ರ ಎಲ್ಲಾ ಜಾತಿ ಜನಾಂಗಗಳ ಸಾಮಾಜಿಕ ಪ್ರಗತಿ ಸಾಧ್ಯ’ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಸದಸ್ಯ ಪಿ.ಅನಿಲ್ಕುಮಾರ ಹೇಳಿದರು.</p>.<p>ಪಟ್ಟಣದ ಅಮೃತ ಕಾಲೊನಿಯಲ್ಲಿ ದಲಿತ ಸಮರ ಸೇನೆ ಹಾಗೂ ಕರ್ನಾಟಕ ಸ್ಲಂ ಜನರ ಕ್ರಿಯಾ ವೇದಿಕೆ ಜಂಟಿಯಾಗಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಸಾಮಾಜಿಕ ಹೋರಾಟಗಾರ ಅಂಬಣ್ಣ ಅರೋಲಿಕರ್ ಮಾತನಾಡಿ, ‘ ಅಂಬೇಡ್ಕರ್ ಅವರ ಹೋರಾಟ ಹಾಗೂ ಪರಿಶ್ರಮದಿಂದ ದೇಶದ ಎಲ್ಲಾ ಶೋಷಿತ ಸಮುದಾಯಗಳು ಏಳಿಗೆ ಹೊಂದಲು ಸಾಧ್ಯವಾಗಿದೆ’ ಎಂದರು.</p>.<p>ಮುಖಂಡರಾದ ಯಲ್ಲಪ್ಪ ಬಾದರದಿನ್ನಿ, ಜೆ.ರವಿಕುಮಾರ್ ವಕೀಲ, ಪತ್ರಕರ್ತ ಆನಂದಸ್ವಾಮಿ ನಕ್ಕುಂದಿ ಹಾಗೂ ರಾಜ್ಯ ಲಲಿತಕಲಾ ಅಕಾಡೆಮಿ ಮಾಜಿ ಸದಸ್ಯ ವಾಜೀದ್ ಸಾಜಿದ್ ಮಾತನಾಡಿದರು.</p>.<p>ಜಿಲ್ಲಾ ದಲಿತ ಸಮರ ಸೇನೆಯ ಅಧ್ಯಕ್ಷ್ಷ ಅನಿಲ್ ನೀಲಕಂಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಚಂದ್ರಶೇಖರ ಮದ್ಲಾಪೂರ. ಬಸವರಾಜ ನಿಲೋಗಲ್, ಅಲ್ಲಮಪ್ರಭು ಕವಿತಾಳ, ಕರಿಯಪ್ಪ, ಪ್ರಕಾಶ್, ಶ್ರೀನಿವಾಸ್ ರೆಡ್ಡಿ ಮೌನೇಶ್, ಶರಣಪ್ಪ, ಮೋದಿನ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>