<p><strong>ಮಸ್ಕಿ:</strong> ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶನ ಮೂರ್ತಿಗಳನ್ನು ತಯಾರು ಮಾಡಿ ಮಾರಾಟ ಮಾಡುವ ಈ ದಿನಗಳಲ್ಲಿ ಪಟ್ಟಣದಲ್ಲಿ ಮಣ್ಣಿನಲ್ಲಿಯೇ ಪರಿಸರ ಸ್ನೇಹಿ ಗಣೇಶನ ವಿಗ್ರಹಗಳ ತಯಾರಿಕೆ ನಡೆಯುತ್ತಿದೆ.</p>.<p>ಮಣ್ಣಿನಲ್ಲಿಯೇ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ತಯಾರು ಮಾಡುವ ಮೂಲಕ ವಿಶ್ವಕರ್ಮ ಸಮಾಜದ ಯುವ ಕಲಾವಿದ ಬಸವರಾಜ ಬಡಿಗೇರ್ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾನೆ.</p>.<p>ತನ್ನ ಕಿರಿದಾದ ಅಂಗಡಿಯಲ್ಲಿ ಕಳೆದ ಆರು ವರ್ಷಗಳಿಂದ 1 ಅಡಿಯಿಂದ 10 ಅಡಿವರೆಗೆ ವಿವಿಧ ಭಂಗಿಯ ಪರಿಸರ ಸ್ನೇಹಿ ಗಣೇಶನ ವಿಗ್ರಹಗಳನ್ನು ಸಿದ್ಧಮಾಡಿ ಗ್ರಾಹಕರ ಕೈಗುಟುವ ದರಕ್ಕೆ ಮಾರಾಟ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.</p>.<p>ಪ್ರತಿ ಗಣೇಶನ ಹಬ್ಬಕ್ಕೆ 80 ರಿಂದ 100 ಗಣಪನ ಮೂರ್ತಿಗಳನ್ನು ಮಣ್ಣಿನಲ್ಲಿ ಮಾಡಿ ಅವುಗಳಿಗೆ ಜೀವ ಕಳೆ ತುಂಬುವ ಕೆಲಸ ಬಸವರಾಜ ಬಡಿಗೇರ್ ಮಾಡಿಕೊಂಡು ಬರುತ್ತಿದ್ದಾರೆ.</p>.<p>ಶ್ರೀರಾಮಚಂದ್ರ, ಆಂಜನೇಯ ಸೇರಿದಂತೆ ವಿವಿಧ ಅವತಾರದ ಗಣೇಶನನ್ನು ತಯಾರು ಮಾಡುವ ಇವರು ಈಗಾಗಲೇ ಸಿದ್ದಗೊಂಡಿರುವ ಅನೇಕ ಗಣೇಶನ ವಿಗ್ರಹಗಳಿಗೆ ಅಂತಿಮ ಹಂತದ ರೂಪ ಕೊಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಬಸವರಾಜ ಅವರ ಪರಿಸರ ಪ್ರೇಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶನ ಮೂರ್ತಿಗಳನ್ನು ತಯಾರು ಮಾಡಿ ಮಾರಾಟ ಮಾಡುವ ಈ ದಿನಗಳಲ್ಲಿ ಪಟ್ಟಣದಲ್ಲಿ ಮಣ್ಣಿನಲ್ಲಿಯೇ ಪರಿಸರ ಸ್ನೇಹಿ ಗಣೇಶನ ವಿಗ್ರಹಗಳ ತಯಾರಿಕೆ ನಡೆಯುತ್ತಿದೆ.</p>.<p>ಮಣ್ಣಿನಲ್ಲಿಯೇ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನು ತಯಾರು ಮಾಡುವ ಮೂಲಕ ವಿಶ್ವಕರ್ಮ ಸಮಾಜದ ಯುವ ಕಲಾವಿದ ಬಸವರಾಜ ಬಡಿಗೇರ್ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾನೆ.</p>.<p>ತನ್ನ ಕಿರಿದಾದ ಅಂಗಡಿಯಲ್ಲಿ ಕಳೆದ ಆರು ವರ್ಷಗಳಿಂದ 1 ಅಡಿಯಿಂದ 10 ಅಡಿವರೆಗೆ ವಿವಿಧ ಭಂಗಿಯ ಪರಿಸರ ಸ್ನೇಹಿ ಗಣೇಶನ ವಿಗ್ರಹಗಳನ್ನು ಸಿದ್ಧಮಾಡಿ ಗ್ರಾಹಕರ ಕೈಗುಟುವ ದರಕ್ಕೆ ಮಾರಾಟ ಮಾಡುವ ಮೂಲಕ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.</p>.<p>ಪ್ರತಿ ಗಣೇಶನ ಹಬ್ಬಕ್ಕೆ 80 ರಿಂದ 100 ಗಣಪನ ಮೂರ್ತಿಗಳನ್ನು ಮಣ್ಣಿನಲ್ಲಿ ಮಾಡಿ ಅವುಗಳಿಗೆ ಜೀವ ಕಳೆ ತುಂಬುವ ಕೆಲಸ ಬಸವರಾಜ ಬಡಿಗೇರ್ ಮಾಡಿಕೊಂಡು ಬರುತ್ತಿದ್ದಾರೆ.</p>.<p>ಶ್ರೀರಾಮಚಂದ್ರ, ಆಂಜನೇಯ ಸೇರಿದಂತೆ ವಿವಿಧ ಅವತಾರದ ಗಣೇಶನನ್ನು ತಯಾರು ಮಾಡುವ ಇವರು ಈಗಾಗಲೇ ಸಿದ್ದಗೊಂಡಿರುವ ಅನೇಕ ಗಣೇಶನ ವಿಗ್ರಹಗಳಿಗೆ ಅಂತಿಮ ಹಂತದ ರೂಪ ಕೊಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಬಸವರಾಜ ಅವರ ಪರಿಸರ ಪ್ರೇಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>