<p><strong>ರಾಯಚೂರು</strong>: ನಗರಸಭೆಯಿಂದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿ ಬೀದಿ ನಾಯಿಗಳನ್ನು ಹಿಡಿಯಲಾಯಿತು.</p>.<p>ಪ್ರಸಕ್ತ ವರ್ಷದಲ್ಲಿ ಅಂದಾಜು 2,200 ಬೀದಿ ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಲಾಗುವುದು ಎಂದು ಆಯುಕ್ತ ಗುರುಸಿದ್ಧಯ್ಯ ತಿಳಿಸಿದರು.</p>.<p>ಕಾರ್ಯಾಚರಣೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪರಿಸರ) ಜೈಪಾಲ್ ರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕ ಅಮರೇಶ ಡಿ, ಮಹಮದ್ ಖಾನ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>‘ನಗರದ ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದವು. ನಾಯಿಗಳ ದಾಳಿಯಿಂದ ಯುವತಿಯೊಬ್ಬರು ಸಾವನ್ನಪ್ಪಿದ್ದರು. ತಡವಾಗಿಯಾದರೂ ಎಚ್ಚೆತ್ತ ನಗರಸಭೆಯ ಕಾರ್ಯ ಶ್ಲಾಘನೀಯ’ ಎಂದು ರೈಲ್ವೆ ಮಂಡಳಿ ಸಲಹಾ ಸಮಿತಿ ಮಾಜಿ ಸದಸ್ಯ ಬಾಬುರಾವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರಸಭೆಯಿಂದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿ ಬೀದಿ ನಾಯಿಗಳನ್ನು ಹಿಡಿಯಲಾಯಿತು.</p>.<p>ಪ್ರಸಕ್ತ ವರ್ಷದಲ್ಲಿ ಅಂದಾಜು 2,200 ಬೀದಿ ನಾಯಿಗಳನ್ನು ಹಿಡಿದು ಸಂತಾನಶಕ್ತಿ ಹರಣ ಚಿಕಿತ್ಸೆ ಮಾಡಿಸಲಾಗುವುದು ಎಂದು ಆಯುಕ್ತ ಗುರುಸಿದ್ಧಯ್ಯ ತಿಳಿಸಿದರು.</p>.<p>ಕಾರ್ಯಾಚರಣೆಯಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪರಿಸರ) ಜೈಪಾಲ್ ರೆಡ್ಡಿ, ಹಿರಿಯ ಆರೋಗ್ಯ ನಿರೀಕ್ಷಕ ಅಮರೇಶ ಡಿ, ಮಹಮದ್ ಖಾನ್ ನೇತೃತ್ವದಲ್ಲಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.</p>.<p>‘ನಗರದ ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದವು. ನಾಯಿಗಳ ದಾಳಿಯಿಂದ ಯುವತಿಯೊಬ್ಬರು ಸಾವನ್ನಪ್ಪಿದ್ದರು. ತಡವಾಗಿಯಾದರೂ ಎಚ್ಚೆತ್ತ ನಗರಸಭೆಯ ಕಾರ್ಯ ಶ್ಲಾಘನೀಯ’ ಎಂದು ರೈಲ್ವೆ ಮಂಡಳಿ ಸಲಹಾ ಸಮಿತಿ ಮಾಜಿ ಸದಸ್ಯ ಬಾಬುರಾವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>