ರಾಯಚೂರು: ನಗರದ ತಿಮ್ಮಾಪುರ ಪೇಟೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರಕ್ಕೆ ‘ಅಪ್ಪು ಅಂಗನವಾಡಿ ಕೇಂದ್ರ’ ಎಂದು ನಾಮಕರಣ ಮಾಡಿದ್ದು, ಶಾಸಕ ಡಾ.ಶಿವರಾಜ ಪಾಟೀಲ ಭಾನುವಾರ ಉದ್ಘಾಟಿಸಿದರು.
ಆನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಿಗೂ ಅಪ್ಪು ಹೆಸರಿಡಲು ರಾಜ್ಯ ಸರ್ಕಾರಕ್ಕೆ ಕೋರಲಾಗುವುದು ಎಂದರು.
ನಗರದ ಗಾಂಧಿಚೌಕ್ ಹನುಮಾನ ದೇವಸ್ಥಾನ ಅರ್ಚಕ ಪವನ ಆಚಾರ್ ಅವರ ಮೂಲಕ ವೇದಿಕೆಯಿಂದ ಚಿತ್ರನಟ ಶಿವರಾಜಕುಮಾರ್ ಅವರಿಗೆ ವಿಡಿಯೊಕಾಲ್ ಮಾಡಿ ಕಾರ್ಯಕ್ರಮದ ವಿವರ ತಿಳಿಸಲಾಯಿತು.