ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರಿನಲ್ಲಿ ಅಪ್ಪು ಅಂಗನವಾಡಿ ಕೇಂದ್ರ ಉದ್ಘಾಟನೆ: ಅಭಿಮಾನಿಗಳಿಗೆ ಅನ್ನಸಂತರ್ಪಣೆ

Last Updated 13 ಮಾರ್ಚ್ 2022, 13:44 IST
ಅಕ್ಷರ ಗಾತ್ರ

ರಾಯಚೂರು: ನಗರದ ತಿಮ್ಮಾಪುರ ಪೇಟೆಯಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕೇಂದ್ರಕ್ಕೆ ‘ಅಪ್ಪು ಅಂಗನವಾಡಿ ಕೇಂದ್ರ’ ಎಂದು ನಾಮಕರಣ ಮಾಡಿದ್ದು, ಶಾಸಕ ಡಾ.ಶಿವರಾಜ ಪಾಟೀಲ ಭಾನುವಾರ ಉದ್ಘಾಟಿಸಿದರು.

ಆನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಿಗೂ ಅಪ್ಪು ಹೆಸರಿಡಲು ರಾಜ್ಯ ಸರ್ಕಾರಕ್ಕೆ ಕೋರಲಾಗುವುದು ಎಂದರು.

ನಗರದ ಗಾಂಧಿಚೌಕ್‌ ಹನುಮಾನ ದೇವಸ್ಥಾನ ಅರ್ಚಕ ಪವನ ಆಚಾರ್‌ ಅವರ ಮೂಲಕ ವೇದಿಕೆಯಿಂದ ಚಿತ್ರನಟ ಶಿವರಾಜಕುಮಾರ್‌ ಅವರಿಗೆ ವಿಡಿಯೊಕಾಲ್‌ ಮಾಡಿ ಕಾರ್ಯಕ್ರಮದ ವಿವರ ತಿಳಿಸಲಾಯಿತು.

‘ಅಪ್ಪು ಹೆಸರಿನಲ್ಲಿ ರಾಯಚೂರು ಜಿಲ್ಲೆಯ ಕಲಾವಿದರಿಗೆ ಪ್ರತಿವರ್ಷ ₹1 ಲಕ್ಷ ಮೊತ್ತದ ಪ್ರಶಸ್ತಿ ನೀಡುವುದಾಗಿ ಈ ಮೊದಲೇ ಘೋಷಿಸಿದ್ದೇನೆ. ಮೊದಲ ಕಾರ್ಯಕ್ರಮಕ್ಕೆ ತಾವು ಬರಬೇಕು’ ಎಂದು ಶಾಸಕರು ಇದೇ ವೇಳೆ ಆಹ್ವಾನಿಸಿದರು.

ಖಂಡಿತ ಬರುವುದಾಗಿ ನಟ ಶಿವರಾಜಕುಮಾರ್‌ ಒಪ್ಪಿಗೆ ಸೂಚಿಸಿದರು. ಎಲ್ಲರಿಗೂ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ವಾರ್ಡ್‌ ಸಂಖ್ಯೆ 16 ರ ಸದಸ್ಯೆ ಗಾಯತ್ರಿ ಹರೀಶ್‌ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT