<p><strong>ರಾಯಚೂರು: </strong>ಕೋವಿಡ್ ಕರ್ತವ್ಯದಲ್ಲಿದ್ದ ಎಲ್ಲರಿಗೂ ಪಿ.ಪಿ.ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಜರ್ ಒದಗಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>ಇಡೀ ಕುಟುಂಬಕ್ಕೆ ಉಚಿತ ಚಿಕಿತ್ಸೆ ನೀಡಬೇಕು. ಅಮ್ಲಜನಕ, ಅಗತ್ಯ ಔಷಧಿಗಳು ಮತ್ತು ಆಸ್ಪತ್ರೆಯಲ್ಲಿ ಹಾಸಿಗೆಗಳು ಇಲ್ಲದೇ ಜನರು ಸಾಯುತ್ತಿರುವ ಆರೋಗ್ಯ ಬಿಕ್ಕಟ್ಟಿಗೆ ನಾವು ಬಲಿಯಾಗಿದ್ದೇವೆ. ಎಲ್ಲರಿಗೂ ₹50 ಲಕ್ಷ ಜೀವವಿಮೆ ಸೌಲಭ್ಯ ಕಲ್ಪಿಸಬೇಕು ಹಾಗೂ ಸೊಂಕಿತರಿಗೆ ₹10 ಲಕ್ಷ ಪರಿಹಾರ ಕೊಡಬೇಕು. ಮಾಸಿಕ ₹10 ಸಾವಿರ ರಿಸ್ಕ್-ಭತ್ಯೆ ಮತ್ತು ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಐ.ಸಿ.ಡಿ.ಎಸ್. ಫಲಾನುಭವಿಗಳಿಗೆ ನೀಡುವ ಪೌಷ್ಟಿಕ ಅಂಶಗಳನ್ನು ದ್ವಿಗುಣಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಂದ ನ್ಯೂಟ್ರಿ-ಗಾರ್ಡನ್, ಬೇಡ ಬಾಕಿ ಇರುವ ಎಲ್ಲಾ ವೇತನ ಮತ್ತು ಭತ್ಯೆಗಳ ಪಾವತಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ಎಚ್.ಪದ್ಮಾ, ಪದಾಧಿಕಾರಿಗಳಾದ ಪಾರ್ವತಿ, ಗೋಕರಮ್ಮ, ರಾಜಶ್ರೀ, ಶರಣಮ್ಮ, ಭಾಗ್ಯಮ್ಮ, ಪಾರ್ವತಿ, ರಹೇಮತ್, ಶಾಂತಾ, ನಾಗಮ್ಮ ಗಧಾರ, ಆಸ್ಮಾ, ಶಾರದಮ್ಮ, ವೆಂಕಟಮ್ಮ, ನರ್ಮದಾ, ಶರಣಬಸವ ಡಿ.ಎಸ್, ವರಲಕ್ಷಿö್ಮÃ, ಭಾಗ್ಯಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಕೋವಿಡ್ ಕರ್ತವ್ಯದಲ್ಲಿದ್ದ ಎಲ್ಲರಿಗೂ ಪಿ.ಪಿ.ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಜರ್ ಒದಗಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಪ್ರಧಾನಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.</p>.<p>ಇಡೀ ಕುಟುಂಬಕ್ಕೆ ಉಚಿತ ಚಿಕಿತ್ಸೆ ನೀಡಬೇಕು. ಅಮ್ಲಜನಕ, ಅಗತ್ಯ ಔಷಧಿಗಳು ಮತ್ತು ಆಸ್ಪತ್ರೆಯಲ್ಲಿ ಹಾಸಿಗೆಗಳು ಇಲ್ಲದೇ ಜನರು ಸಾಯುತ್ತಿರುವ ಆರೋಗ್ಯ ಬಿಕ್ಕಟ್ಟಿಗೆ ನಾವು ಬಲಿಯಾಗಿದ್ದೇವೆ. ಎಲ್ಲರಿಗೂ ₹50 ಲಕ್ಷ ಜೀವವಿಮೆ ಸೌಲಭ್ಯ ಕಲ್ಪಿಸಬೇಕು ಹಾಗೂ ಸೊಂಕಿತರಿಗೆ ₹10 ಲಕ್ಷ ಪರಿಹಾರ ಕೊಡಬೇಕು. ಮಾಸಿಕ ₹10 ಸಾವಿರ ರಿಸ್ಕ್-ಭತ್ಯೆ ಮತ್ತು ಹೆಚ್ಚುವರಿ ಕೆಲಸಕ್ಕೆ ಹೆಚ್ಚುವರಿ ವೇತನ ನೀಡಬೇಕು ಎಂದು ಆಗ್ರಹಿಸಿದರು.</p>.<p>ಐ.ಸಿ.ಡಿ.ಎಸ್. ಫಲಾನುಭವಿಗಳಿಗೆ ನೀಡುವ ಪೌಷ್ಟಿಕ ಅಂಶಗಳನ್ನು ದ್ವಿಗುಣಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಂದ ನ್ಯೂಟ್ರಿ-ಗಾರ್ಡನ್, ಬೇಡ ಬಾಕಿ ಇರುವ ಎಲ್ಲಾ ವೇತನ ಮತ್ತು ಭತ್ಯೆಗಳ ಪಾವತಿಸಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಜಿಲ್ಲಾಧ್ಯಕ್ಷ ಎಚ್.ಪದ್ಮಾ, ಪದಾಧಿಕಾರಿಗಳಾದ ಪಾರ್ವತಿ, ಗೋಕರಮ್ಮ, ರಾಜಶ್ರೀ, ಶರಣಮ್ಮ, ಭಾಗ್ಯಮ್ಮ, ಪಾರ್ವತಿ, ರಹೇಮತ್, ಶಾಂತಾ, ನಾಗಮ್ಮ ಗಧಾರ, ಆಸ್ಮಾ, ಶಾರದಮ್ಮ, ವೆಂಕಟಮ್ಮ, ನರ್ಮದಾ, ಶರಣಬಸವ ಡಿ.ಎಸ್, ವರಲಕ್ಷಿö್ಮÃ, ಭಾಗ್ಯಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>