ರಾಯಚೂರು: ಕೋವಿಡ್ನಿಂದ ಮೃತಪಟ್ಟ 25 ಅಂಗನವಾಡಿ ಕಾರ್ಯಕರ್ತೆಯರಿಗೆ ₹30 ಲಕ್ಷ ಪರಿಹಾರ ನೀಡಬೇಕು. ಕಾರ್ಯಕರ್ತೆಯರಿಗೆ ಅಗತ್ಯವಾದ ಮಾಸ್ಕ್, ಸ್ಯಾನಿಟೈಸರ್ ಇತರೆ ಸುರಕ್ಷತಾ ಸಾಮಾಗ್ರಿಗಳನ್ನು ನೀಡಬೇಕು. ಗರ್ಭಿಣಿ, ಬಾಣಂತಿಯರಿಗೆ ಕೆಲಸದಿಂದ ವಿನಾಯ್ತಿ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕೋವಿಡ್ ಮೊದಲನೇ ಅಲೆಯಲ್ಲಿ ಕರ್ತವ್ಯನಿರತ ಅಂಗನವಾಡಿ ನೌಕರರು ಮೃತಪಟ್ಟಿದರೂ ಈವರೆಗೆ ಪರಿಹಾರ ನೀಡಿಲ್ಲ. ಕೋವಿಡ್ ಸಂದರ್ಭದಲ್ಲಿ ಮನೆಮನೆಗೆ ಭೇಟಿ ಸ್ಯಾಂಪಲ್ ಸಂಗ್ರಹ, ಮಾತ್ರೆ ವಿತರಣೆ, ಜಾಗೃತಿ ಕಾರ್ಯಕ್ರಮ, ಸಮೀಕ್ಷೆ ಸೇರಿದಂತೆ ವಿವಿಧ ಕೆಲಸ ಮಾಡುತ್ತಿದ್ದು ಅಗತ್ಯ ರಕ್ಷಣೆ ನೀಡುತ್ತಿಲ್ಲ ಎಂದು ದೂರಿದರು.