<p><strong>ಲಿಂಗಸುಗೂರು: </strong>ತಾಲ್ಲೂಕಿನ ಸುಕ್ಷೇತ್ರ ಗುರುಗುಂಟಾ ಅಮರೇಶ್ವರ ದೇವಸ್ಥಾನ ಸುತ್ತಮುತ್ತಲ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ನೂರಾರು ಸಂಖ್ಯೆಯಲ್ಲಿ ನವಿಲುಗಳು ವಾಸವಾಗಿವೆ. ಅವುಗಳ ರಕ್ಷಣೆ ಜೊತೆ ವೀಕ್ಷಣೆಗೆ ಅನುಕೂಲ ಮಾಡಲು ನವಿಲು ಧಾಮ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂಬುದು ಇಲ್ಲಿನ ಯುವಕರ ಒತ್ತಾಸೆಯಾಗಿದೆ.</p>.<p>ತಾಲ್ಲೂಕು ಕೇಂದ್ರದಿಂದ 16 ಕಿ.ಮೀ ಅಂತರದಲ್ಲಿರುವ ಐತಿಹಾಸಿಕ ದೇವಸ್ಥಾನ ಅಮರೇಶ್ವರ ದರ್ಶನಕ್ಕೆ ರಾಜ್ಯ ಸೇರಿದಂತೆ ಹೊರ ರಾಜ್ಯದ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಈ ಪವಿತ್ರ ಸ್ಥಳದಲ್ಲಿ ಈಗಾಗಲೆ ದೈವಿವನ ತಲೆ ಎತ್ತಿದೆ.</p>.<p>ಕಾಯ್ದಿಟ್ಟ ಅರಣ್ಯ ಪ್ರದೇಶದ ಆಯಕಟ್ಟಿನ ಸ್ಥಳಗಳಲ್ಲಿ ನೂರಾರು ನವಿಲುಗಳು ವಾಸಿಸುತ್ತಿವೆ. ಅಲ್ಲದೆ, ದೇವನಹಳ್ಳ, ಕಸಬಾ ಲಿಂಗಸುಗೂರು ಸುತ್ತಮುತ್ತ ಕೂಡ ಸಾಕಷ್ಟು ಪ್ರಮಾಣದ ನವಿಲುಗಳು ಇದ್ದು ರಕ್ಷಣೆ ನಿರ್ಲಕ್ಷ್ಯದಿಂದ ಬೇಟೆಗಾರರ ಕೃತ್ಯಕ್ಕೆ ಬಲಿಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ದೇವಸ್ಥಾನ ಸಮಿತಿ ಹಾಗೂ ಅರಣ್ಯ ಇಲಾಖೆ ಬೇಟೆಗಾರರ ಆಮಿಷಕ್ಕೆ ಬಲಿಯಾಗುತ್ತಿರುವ ನವಿಲು ಸಂತತಿಯ ಉಳಿಸಿ ಬೆಳೆಸಲು ಮುಂದಾಗಬೇಕು. ದೈವಿವನ ಬಳಿ ನವಿಲು ಧಾಮ ನಿರ್ಮಿಸಿ ಪ್ರವಾಸಿ ತಾಣವೆಂದು ಘೋಷಿಸಬೇಕು ಎಂದು ಪಕ್ಷಿ ಪ್ರಿಯರಾದ ನಾಗರಾಜ, ಆನಂದಯ್ಯ, ವಿಶ್ವನಾಥ, ವೆಂಕನಗೌಡ ಆಗ್ರಹಿಸಿದ್ದಾರೆ.</p>.<p>ಈಗಾಗಲೆ ದೇವಸ್ಥಾನ ಸಮಿತಿ, ಅರಣ್ಯ ಇಲಾಖೆ ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ. ಭವಿಷ್ಯದಲ್ಲಿ ರಾಷ್ಟ್ರೀಯ ಪಕ್ಷಿಗಳನ್ನು ರಕ್ಷಿಸಲು ಮುಂದಾಗದೆ ಹೋದಲ್ಲಿ ಯುವಕರು ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು: </strong>ತಾಲ್ಲೂಕಿನ ಸುಕ್ಷೇತ್ರ ಗುರುಗುಂಟಾ ಅಮರೇಶ್ವರ ದೇವಸ್ಥಾನ ಸುತ್ತಮುತ್ತಲ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ನೂರಾರು ಸಂಖ್ಯೆಯಲ್ಲಿ ನವಿಲುಗಳು ವಾಸವಾಗಿವೆ. ಅವುಗಳ ರಕ್ಷಣೆ ಜೊತೆ ವೀಕ್ಷಣೆಗೆ ಅನುಕೂಲ ಮಾಡಲು ನವಿಲು ಧಾಮ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂಬುದು ಇಲ್ಲಿನ ಯುವಕರ ಒತ್ತಾಸೆಯಾಗಿದೆ.</p>.<p>ತಾಲ್ಲೂಕು ಕೇಂದ್ರದಿಂದ 16 ಕಿ.ಮೀ ಅಂತರದಲ್ಲಿರುವ ಐತಿಹಾಸಿಕ ದೇವಸ್ಥಾನ ಅಮರೇಶ್ವರ ದರ್ಶನಕ್ಕೆ ರಾಜ್ಯ ಸೇರಿದಂತೆ ಹೊರ ರಾಜ್ಯದ ಲಕ್ಷಾಂತರ ಭಕ್ತರು ಬಂದು ಹೋಗುತ್ತಾರೆ. ಈ ಪವಿತ್ರ ಸ್ಥಳದಲ್ಲಿ ಈಗಾಗಲೆ ದೈವಿವನ ತಲೆ ಎತ್ತಿದೆ.</p>.<p>ಕಾಯ್ದಿಟ್ಟ ಅರಣ್ಯ ಪ್ರದೇಶದ ಆಯಕಟ್ಟಿನ ಸ್ಥಳಗಳಲ್ಲಿ ನೂರಾರು ನವಿಲುಗಳು ವಾಸಿಸುತ್ತಿವೆ. ಅಲ್ಲದೆ, ದೇವನಹಳ್ಳ, ಕಸಬಾ ಲಿಂಗಸುಗೂರು ಸುತ್ತಮುತ್ತ ಕೂಡ ಸಾಕಷ್ಟು ಪ್ರಮಾಣದ ನವಿಲುಗಳು ಇದ್ದು ರಕ್ಷಣೆ ನಿರ್ಲಕ್ಷ್ಯದಿಂದ ಬೇಟೆಗಾರರ ಕೃತ್ಯಕ್ಕೆ ಬಲಿಯಾಗುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ದೇವಸ್ಥಾನ ಸಮಿತಿ ಹಾಗೂ ಅರಣ್ಯ ಇಲಾಖೆ ಬೇಟೆಗಾರರ ಆಮಿಷಕ್ಕೆ ಬಲಿಯಾಗುತ್ತಿರುವ ನವಿಲು ಸಂತತಿಯ ಉಳಿಸಿ ಬೆಳೆಸಲು ಮುಂದಾಗಬೇಕು. ದೈವಿವನ ಬಳಿ ನವಿಲು ಧಾಮ ನಿರ್ಮಿಸಿ ಪ್ರವಾಸಿ ತಾಣವೆಂದು ಘೋಷಿಸಬೇಕು ಎಂದು ಪಕ್ಷಿ ಪ್ರಿಯರಾದ ನಾಗರಾಜ, ಆನಂದಯ್ಯ, ವಿಶ್ವನಾಥ, ವೆಂಕನಗೌಡ ಆಗ್ರಹಿಸಿದ್ದಾರೆ.</p>.<p>ಈಗಾಗಲೆ ದೇವಸ್ಥಾನ ಸಮಿತಿ, ಅರಣ್ಯ ಇಲಾಖೆ ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ. ಭವಿಷ್ಯದಲ್ಲಿ ರಾಷ್ಟ್ರೀಯ ಪಕ್ಷಿಗಳನ್ನು ರಕ್ಷಿಸಲು ಮುಂದಾಗದೆ ಹೋದಲ್ಲಿ ಯುವಕರು ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>