<p><strong>ಕವಿತಾಳ:</strong> ಸಮೀಪದ ಇರಕಲ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮೇಲ್ದರ್ಜೇಗೆ ಏರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ಒತ್ತಾಯಿಸಿದೆ.</p>.<p>ಈ ಕುರಿತು ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿ ಜೀವನ್ ಸಾಬ ಅವರಿಗೆ ಈಚೆಗೆ ಮನವಿ ಪತ್ರ ಸಲ್ಲಿಸಲಾಗಿದೆ.</p>.<p>ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸದ್ಯ 5ನೇ ತರಗತಿಯ ವರೆಗೆ ಮಾತ್ರ ಕಲಿಯಲು ಅವಕಾಶವಿದ್ದು, 6ನೇ ತರಗತಿಗೆ ಬೇರೆ ಊರುಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಬಸ್ ಸೌಲಭ್ಯವಿಲ್ಲದ ಕಾರಣ ಅಂದಾಜು 8 ಕಿ.ಮೀ ದೂರದ ತೋರಣದಿನ್ನಿ, ಹಾಲಾಪುರ ಗ್ರಾಮಗಳಿಗೆ ನಡೆದು ಹೋಗಬೇಕಿದ್ದು ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಾರೆ. ಅದರಲ್ಲೂ ಬಾಲಕಿಯರಿಗೆ ನಡೆದು ಹೋಗಲು ಪಾಲಕರು ಅವಕಾಶ ನೀಡದ ಕಾರಣ ಶಿಕ್ಷಣ ಮೊಟಕುಗೊಳಿಸುವಂತಾಗಿದೆ. ಈ ಶಾಲೆಯನ್ನು ಹಿರಿಯ ಪ್ರಾಥಮಿಕ ಶಾಲೆಯನ್ನಾಗಿ ಮೇಲ್ದರ್ಜೇಗೇರಿಸಿ 7ನೇ ತರಗತಿ ವರೆಗೆ ಶಿಕ್ಷಣ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.</p>.<p>ಸಂಘಟನೆ ಅಧ್ಯಕ್ಷ ಮೌನೇಶ ತುಗ್ಗಲದಿನ್ನಿ, ಹುಸೇನಪ್ಪ, ಗುರು ಮಾನ್ವಿ, ಅಮರೇಶ ಬ್ಯಾಗವಾಟ್, ಮೌನೇಶ ನಕ್ಕುಂದಿ, ಲಿಂಗರಾಜು ಬ್ಯಾಗವಾಟ್, ಓಂಕಾರ ಚಿಕ್ಕ ಕೊಟ್ನೇಕಲ್, ರಾಜು ಚಾಗಭಾವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ಸಮೀಪದ ಇರಕಲ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮೇಲ್ದರ್ಜೇಗೆ ಏರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಸಂಘಟನೆ ಒತ್ತಾಯಿಸಿದೆ.</p>.<p>ಈ ಕುರಿತು ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿ ಜೀವನ್ ಸಾಬ ಅವರಿಗೆ ಈಚೆಗೆ ಮನವಿ ಪತ್ರ ಸಲ್ಲಿಸಲಾಗಿದೆ.</p>.<p>ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸದ್ಯ 5ನೇ ತರಗತಿಯ ವರೆಗೆ ಮಾತ್ರ ಕಲಿಯಲು ಅವಕಾಶವಿದ್ದು, 6ನೇ ತರಗತಿಗೆ ಬೇರೆ ಊರುಗಳಿಗೆ ಹೋಗಬೇಕಾದ ಅನಿವಾರ್ಯತೆ ಇದೆ. ಬಸ್ ಸೌಲಭ್ಯವಿಲ್ಲದ ಕಾರಣ ಅಂದಾಜು 8 ಕಿ.ಮೀ ದೂರದ ತೋರಣದಿನ್ನಿ, ಹಾಲಾಪುರ ಗ್ರಾಮಗಳಿಗೆ ನಡೆದು ಹೋಗಬೇಕಿದ್ದು ಮಕ್ಕಳನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂದೇಟು ಹಾಕುತ್ತಾರೆ. ಅದರಲ್ಲೂ ಬಾಲಕಿಯರಿಗೆ ನಡೆದು ಹೋಗಲು ಪಾಲಕರು ಅವಕಾಶ ನೀಡದ ಕಾರಣ ಶಿಕ್ಷಣ ಮೊಟಕುಗೊಳಿಸುವಂತಾಗಿದೆ. ಈ ಶಾಲೆಯನ್ನು ಹಿರಿಯ ಪ್ರಾಥಮಿಕ ಶಾಲೆಯನ್ನಾಗಿ ಮೇಲ್ದರ್ಜೇಗೇರಿಸಿ 7ನೇ ತರಗತಿ ವರೆಗೆ ಶಿಕ್ಷಣ ನೀಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.</p>.<p>ಸಂಘಟನೆ ಅಧ್ಯಕ್ಷ ಮೌನೇಶ ತುಗ್ಗಲದಿನ್ನಿ, ಹುಸೇನಪ್ಪ, ಗುರು ಮಾನ್ವಿ, ಅಮರೇಶ ಬ್ಯಾಗವಾಟ್, ಮೌನೇಶ ನಕ್ಕುಂದಿ, ಲಿಂಗರಾಜು ಬ್ಯಾಗವಾಟ್, ಓಂಕಾರ ಚಿಕ್ಕ ಕೊಟ್ನೇಕಲ್, ರಾಜು ಚಾಗಭಾವಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>