<p><strong>ರಾಯಚೂರು:</strong> ನಗರದ ಸೌಂದರ್ಯೀಕರಣ, ಬೀದಿ ದೀಪಗಳ ಅಳವಡಿಕೆ, ಉದ್ಯಾನವನಗಳ ಅಭಿವೃದ್ಧಿಗೆ ₹14 ಕೋಟಿ ಬಜೆಟ್ ಶಾಸಕ ಡಾ.ಶಿವರಾಜ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ನಗರಾಭಿವೃದ್ಧಿ (ರುಡಾ) ಸಭೆಯಲ್ಲಿ ಅನುಮೋದನೆ ನೀಡಲಾಯಿತು.</p>.<p>ನಗರದ ರಾಯಚೂರು ನಗರಾಭಿವೃದ್ಧಿ (ಆರ್ಡಿಎ) ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇದರ ಜೊತೆಗೆ ಪರಿಷ್ಕೃತ ಮಾಸ್ಟರ್ ಪ್ಲಾನ್ ರೂಪಿಸುವುದು ಸೇರಿ ವಿವಿಧ ಅಭಿವೃದ್ಧಿ ಕೆಲಸಗಳ ಕುರಿತು ತೀರ್ಮಾನ ತೆಗೆದುಕೊಳ್ಳಲಾಯಿತು.</p>.<p>ಶಾಸಕ ಡಾ.ಶಿವರಾಜ ಪಾಟೀಲ, ‘ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚ ಹಾಗೂ ಸಂಗ್ರಹಗೊಂಡಿರುವ ಆದಾಯದ ಮೂಲ ಸೇರಿ ಸರ್ಕಾರದಿಂದ ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡುವುದಕ್ಕೆ ಅಗತ್ಯ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ನಗರದ ಸಮಗ್ರ ಅಭಿವೃದ್ಧಿಯ ದೃಷ್ಠಿಕೋನದಿಂದ ಈ ಹಿಂದೆ ರೂಪಿಸಲಾಗಿದ್ದ ಮಾಸ್ಟರ್ ಪ್ಲಾನ್ ಯೋಜನೆಗೆ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ನಿವಾರಿಸಿಕೊಂಡು ಪರಿಷ್ಕೃತ ಯೋಜನೆ ರೂಪಿಸಿ ವರದಿ ಸಿದ್ಧಪಡಿಸಬೇಕು’ ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಮಾತನಾಡಿ, ಭವಿಷ್ಯದಲ್ಲಿ ನಗರದ ಜನಸಂಖ್ಯೆಯ ಬೆಳವಣಿಗೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಪರಿಷ್ಕೃತ ಮಾಸ್ಟರ್ ಪ್ಲಾನ್ ರೂಪಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಸರಿಯಾಗಿ ಯೋಜನೆ ರೂಪಿಸಬೇಕು’ ಎಂದು ಹೇಳಿದರು.</p>.<p>ಸಭೆಯಲ್ಲಿ ಆರ್ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಆಯುಕ್ತ ಜಿಲಾನಿ, ಸದಸ್ಯರು, ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಗರದ ಸೌಂದರ್ಯೀಕರಣ, ಬೀದಿ ದೀಪಗಳ ಅಳವಡಿಕೆ, ಉದ್ಯಾನವನಗಳ ಅಭಿವೃದ್ಧಿಗೆ ₹14 ಕೋಟಿ ಬಜೆಟ್ ಶಾಸಕ ಡಾ.ಶಿವರಾಜ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ನಗರಾಭಿವೃದ್ಧಿ (ರುಡಾ) ಸಭೆಯಲ್ಲಿ ಅನುಮೋದನೆ ನೀಡಲಾಯಿತು.</p>.<p>ನಗರದ ರಾಯಚೂರು ನಗರಾಭಿವೃದ್ಧಿ (ಆರ್ಡಿಎ) ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಇದರ ಜೊತೆಗೆ ಪರಿಷ್ಕೃತ ಮಾಸ್ಟರ್ ಪ್ಲಾನ್ ರೂಪಿಸುವುದು ಸೇರಿ ವಿವಿಧ ಅಭಿವೃದ್ಧಿ ಕೆಲಸಗಳ ಕುರಿತು ತೀರ್ಮಾನ ತೆಗೆದುಕೊಳ್ಳಲಾಯಿತು.</p>.<p>ಶಾಸಕ ಡಾ.ಶಿವರಾಜ ಪಾಟೀಲ, ‘ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚ ಹಾಗೂ ಸಂಗ್ರಹಗೊಂಡಿರುವ ಆದಾಯದ ಮೂಲ ಸೇರಿ ಸರ್ಕಾರದಿಂದ ಮಂಜೂರಾದ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡುವುದಕ್ಕೆ ಅಗತ್ಯ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>‘ನಗರದ ಸಮಗ್ರ ಅಭಿವೃದ್ಧಿಯ ದೃಷ್ಠಿಕೋನದಿಂದ ಈ ಹಿಂದೆ ರೂಪಿಸಲಾಗಿದ್ದ ಮಾಸ್ಟರ್ ಪ್ಲಾನ್ ಯೋಜನೆಗೆ ಉಂಟಾಗಿರುವ ತಾಂತ್ರಿಕ ಸಮಸ್ಯೆಯನ್ನು ನಿವಾರಿಸಿಕೊಂಡು ಪರಿಷ್ಕೃತ ಯೋಜನೆ ರೂಪಿಸಿ ವರದಿ ಸಿದ್ಧಪಡಿಸಬೇಕು’ ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಮಾತನಾಡಿ, ಭವಿಷ್ಯದಲ್ಲಿ ನಗರದ ಜನಸಂಖ್ಯೆಯ ಬೆಳವಣಿಗೆಯನ್ನು ದೃಷ್ಠಿಯಲ್ಲಿಟ್ಟುಕೊಂಡು ಪರಿಷ್ಕೃತ ಮಾಸ್ಟರ್ ಪ್ಲಾನ್ ರೂಪಿಸುವ ಅಗತ್ಯವಿದೆ. ಈ ದಿಸೆಯಲ್ಲಿ ಸರಿಯಾಗಿ ಯೋಜನೆ ರೂಪಿಸಬೇಕು’ ಎಂದು ಹೇಳಿದರು.</p>.<p>ಸಭೆಯಲ್ಲಿ ಆರ್ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಆಯುಕ್ತ ಜಿಲಾನಿ, ಸದಸ್ಯರು, ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>