ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿದಿನ ಬೆಳಿಗ್ಗೆ 5.30 ರಿಂದ ಕೆಲಸ ಆರಂಭಿಸುವ ಪೌರಕಾರ್ಮಿಕರಿಗೆ ನೀರಿನ ವ್ಯವಸ್ಥೆ, ಉಪಹಾರದ ವ್ಯವಸ್ಥೆ ಇರುವುದಿಲ್ಲ. ಎರಡು ವರ್ಷಗಳಿಂದಲೂ ಸುರಕ್ಷತಾ ಸಾಧನಗಳನ್ನು ಕೊಟ್ಟಿಲ್ಲ. ಕನಿಷ್ಠ ಪಕ್ಷ ಕೊರೊನಾ ಸೋಂಕಿನಿಂದ ಸುರಕ್ಷಿತವಾಗಿರಲು ಈಗ ಕೊಡಬೇಕಾಗಿತ್ತು. ಆದರೆ, ಜಿಲ್ಲಾಧಿಕಾರಿ ಮತ್ತು ನಗರಸಭೆ ಪೌರಾಯುಕ್ತರು ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.