ದೇವದುರ್ಗ: ತಾಲ್ಲೂಕಿನ ಗಬ್ಬೂರು ಗ್ರಾಮದ ವಿದ್ಯಾಜೋತಿ ನವೋದಯ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿನಿ ಸಿಂಧು ಹಿರೇಮಠ ಈಚೆಗೆ ನಡೆದ ಅಖಿಲ ಭಾರತ ಸೈನಿಕ ಶಾಲೆ ಪ್ರವೇಶ ಪರೀಕ್ಷೆಯಲ್ಲಿ 300ಕ್ಕೆ 288 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಮತ್ತು ರಾಷ್ಟ್ರಕ್ಕೆ 11ನೇ ಸ್ಥಾನ ಪಡೆದಿದ್ದಾರೆ. ಮತ್ತೊಬ್ಬ ವಿದ್ಯಾರ್ಥಿ ವಿನಾಯಕ 300 ಅಂಕಗಳಿಗೆ 284 ಅಂಕ ಪಡೆದು ರಾಷ್ಟ್ರ ಮಟ್ಟದಲ್ಲಿ 37 ನೇ ಸ್ಥಾನ ಪಡೆದ ಆಯ್ಕೆಯಾಗಿದ್ದಾರೆ.