<p><strong>ರಾಯಚೂರು:</strong> ಜಿಲ್ಲೆಯಲ್ಲಿ ವಿವಿಧೆಡೆ ಗೋವಿನ ಜೋಳ ಬೆಳೆಯಲ್ಲಿ ಫಾಲ್ ಸೈನಿಕ ಹುಳುವಿನ ಬಾಧೆ ಕಾಣಿಸಿಕೊಂಡಿದ್ದು, ನಿಯಂತ್ರಣಕ್ಕೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಜಯಪ್ರಕಾಶ ಸಲಹೆ ನೀಡಿದ್ದಾರೆ.</p>.<p>ಮರಿ ಹುಳುಗಳು ಎಲೆಗಳ ಮೇಲ್ಮೈಯನ್ನು ತಿಂದರೆ, ಡೊಡ್ಡ ಹುಳುಗಳು ಕೇಂದ್ರ ಸುಳಿಯನ್ನು ತಿನ್ನುತ್ತವೆ. ಇದು ವ್ಯಾಪಕವಾದ ಎಲೆಗೊಂಚಲು ಉಂಟು ಮಾಡುತ್ತದೆ. ಇವು ಸುಳಿ ಮತ್ತು ತೆನೆಗಳನ್ನು ತಿಂದು ಹಾಕುತ್ತವೆ.</p>.<p>ನಿಯಂತ್ರಣಕ್ಕೆ ಪೀಡೆ ಸಮೀಕ್ಷೆ ನಡೆಸಿ ಕೀಟದ ಹರಡುವಿಕೆ ಮೇಲೆ ನಿಗಾವಹಿಸಬೇಕು. ಕೀಟದ ಮೊಟ್ಟೆಯ ಗುಂಪು ಮತ್ತು ಮರಿ ಹುಳುಗಳನ್ನು ಕೈಯಿಂದ ಆರಿಸಿ ನಾಶಪಡಿಸಬೇಕು. ಕೀಟದ ಬಾಧೆ ಕಡಿಮೆ ಇದ್ದಾಗ ಮರಿ ಹುಳುಗಳ ನಿಯಂತ್ರಣಕ್ಕೆ ಬೇವಿನ ಮೂಲದ ಕೀಟನಾಶಕ ಅಜಾಡಿರಕ್ಟಿನ್ 1500 ಪಿಪಿಎಮ್ 2 ಮಿಲಿ ಲೀಟರ್ ಅಥವಾ ಜೈವಿಕ ಶಿಲೀಂಧ್ರ ಕೀಟ ನಾಶಕ ಮೆಟಾರೈಜಿಯಮ್ ರಿಲೇ 2 ಗ್ರಾಂ ಅಥವಾ ಮೆಟಾರೈಜಿಯಮ್ ಅನಿಸೊಪ್ಪಿ 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಕೀಟದ ತೀವ್ರತೆ ಜಾಸ್ತಿ ಆದಾಗ ಹುಳುವನ್ನು ಹತೋಟಿಯಲ್ಲಿಡಲು ಲ್ಯಾಮ್ಡಸಹಲೋಥ್ರಿನ್ 1 ಎಂ.ಎಲ್ ಅಥವಾ ಇಮಾಮೆಕ್ಟಿನ್ ಬೆಂಜೋಯಿಟ್ ಶೇ 5ರಷ್ಟು ಎಸ್.ಜಿ. 0.4 ಗ್ರಾಂ ಅಥವಾ ಕ್ಲೊರಾಂತ್ರಿನಿಲಿಪ್ರೆಲ್ 18.5 ಎಸ್.ಸಿ. 0.3 ಮಿಲಿ ಲೀಟರ್ ಅಥವಾ ಸೈನೋಸ್ಯಾಡ್ 45 ಎಸ್.ಸಿ 0.3 ಎಂ.ಎಲ್ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.</p>.<p>ಹೆಚ್ಚಿನ ಮಾಹಿತಿಗೆ ಸಮೀಪ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲೆಯಲ್ಲಿ ವಿವಿಧೆಡೆ ಗೋವಿನ ಜೋಳ ಬೆಳೆಯಲ್ಲಿ ಫಾಲ್ ಸೈನಿಕ ಹುಳುವಿನ ಬಾಧೆ ಕಾಣಿಸಿಕೊಂಡಿದ್ದು, ನಿಯಂತ್ರಣಕ್ಕೆ ರೈತರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ ಜಯಪ್ರಕಾಶ ಸಲಹೆ ನೀಡಿದ್ದಾರೆ.</p>.<p>ಮರಿ ಹುಳುಗಳು ಎಲೆಗಳ ಮೇಲ್ಮೈಯನ್ನು ತಿಂದರೆ, ಡೊಡ್ಡ ಹುಳುಗಳು ಕೇಂದ್ರ ಸುಳಿಯನ್ನು ತಿನ್ನುತ್ತವೆ. ಇದು ವ್ಯಾಪಕವಾದ ಎಲೆಗೊಂಚಲು ಉಂಟು ಮಾಡುತ್ತದೆ. ಇವು ಸುಳಿ ಮತ್ತು ತೆನೆಗಳನ್ನು ತಿಂದು ಹಾಕುತ್ತವೆ.</p>.<p>ನಿಯಂತ್ರಣಕ್ಕೆ ಪೀಡೆ ಸಮೀಕ್ಷೆ ನಡೆಸಿ ಕೀಟದ ಹರಡುವಿಕೆ ಮೇಲೆ ನಿಗಾವಹಿಸಬೇಕು. ಕೀಟದ ಮೊಟ್ಟೆಯ ಗುಂಪು ಮತ್ತು ಮರಿ ಹುಳುಗಳನ್ನು ಕೈಯಿಂದ ಆರಿಸಿ ನಾಶಪಡಿಸಬೇಕು. ಕೀಟದ ಬಾಧೆ ಕಡಿಮೆ ಇದ್ದಾಗ ಮರಿ ಹುಳುಗಳ ನಿಯಂತ್ರಣಕ್ಕೆ ಬೇವಿನ ಮೂಲದ ಕೀಟನಾಶಕ ಅಜಾಡಿರಕ್ಟಿನ್ 1500 ಪಿಪಿಎಮ್ 2 ಮಿಲಿ ಲೀಟರ್ ಅಥವಾ ಜೈವಿಕ ಶಿಲೀಂಧ್ರ ಕೀಟ ನಾಶಕ ಮೆಟಾರೈಜಿಯಮ್ ರಿಲೇ 2 ಗ್ರಾಂ ಅಥವಾ ಮೆಟಾರೈಜಿಯಮ್ ಅನಿಸೊಪ್ಪಿ 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಕೀಟದ ತೀವ್ರತೆ ಜಾಸ್ತಿ ಆದಾಗ ಹುಳುವನ್ನು ಹತೋಟಿಯಲ್ಲಿಡಲು ಲ್ಯಾಮ್ಡಸಹಲೋಥ್ರಿನ್ 1 ಎಂ.ಎಲ್ ಅಥವಾ ಇಮಾಮೆಕ್ಟಿನ್ ಬೆಂಜೋಯಿಟ್ ಶೇ 5ರಷ್ಟು ಎಸ್.ಜಿ. 0.4 ಗ್ರಾಂ ಅಥವಾ ಕ್ಲೊರಾಂತ್ರಿನಿಲಿಪ್ರೆಲ್ 18.5 ಎಸ್.ಸಿ. 0.3 ಮಿಲಿ ಲೀಟರ್ ಅಥವಾ ಸೈನೋಸ್ಯಾಡ್ 45 ಎಸ್.ಸಿ 0.3 ಎಂ.ಎಲ್ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು.</p>.<p>ಹೆಚ್ಚಿನ ಮಾಹಿತಿಗೆ ಸಮೀಪ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬೇಕು ಎಂದು ಜಂಟಿ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>