<p><strong>ರಾಯಚೂರು: </strong>ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ವತಿಯಿಂದ ಧನಸಹಾಯ ಮಾಡಬೇಕು ಎಂದು ಒತ್ತಾಯಿಸಿ ವಿಜಿ ಕಲಾವಿದರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ರಂಗ ಪರಿಷತ್ಗೆ ಕಳೆದ ಮೂರು ವರ್ಷಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ನೀಡುತ್ತಿದ್ದು, ಈ ವರ್ಷ ಇದುವರೆಗೆ ಧನಸಹಾಯ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿಲ್ಲ. ರಾಜ್ಯದಾದ್ಯಂತ ಸಾವಿರಾರು ಸಂಘ ಸಂಸ್ಥೆಗಳು ಹಾಗೂ ಕಲಾವಿದರು ಧನಸಹಾಯಕ್ಕಾಗಿ ಕಾಯುವಂತಾಗಿದೆ. ಹಿಂದಿನ ಸರ್ಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಉದ್ದಟತನದಿಂದ ವರ್ತಿಸಿ ಕಲಾವಿದರು ಕಳ್ಳರೆಂದು ನಿಂದಿಸಿ ಧನಸಹಾಯವನ್ನು ನಿಲ್ಲಿಸಲು ಪ್ರಯತ್ನಿಸಿದ್ದರು.</p>.<p>ಈ ಸರ್ಕಾರ ಮೊದಲಿನಂತೆಯೆ ಧನಸಹಾಯಕ್ಕೆ ಅರ್ಜಿಗಳನ್ನು ಕರೆದು, ಧನ ಸಹಾಯವನ್ನು ಬಿಡುಗಡೆ ಮಾಡಿತ್ತು. ಆದರೆ, ಕೋವಿಡ್ ಕಾರಣದಿಂದ ಬಿಡುಗಡೆಯಾದ ಬಹುಭಾಗ ಹಣವನ್ನು ಸಂಘ ಸಂಸ್ಥೆಗಳಿಗೆ ನೀಡದೇ ತಡೆಹಿಡಿದ್ದರಿಂದ ಕಲಾವಿದರಿಗೆ ಸಮಸ್ಯೆಯಾಗಿದೆ ಎಂದು ದೂರಿದರು.</p>.<p>ಸರ್ಕಾರ ಇವರೆಗೂ ಸಂಘ ಸಂಸ್ಥೆಗಳಿಂದ ಮತ್ತು ಕಲಾವಿದರಿಂದ ಧನಸಹಾಯಕ್ಕಾಗಿ ಅರ್ಜಿಗಳನ್ನು ಕರೆದಿಲ್ಲ. ಕಲೆಯನ್ನೆ ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ಕಲಾವಿದರ ಬದುಕು ಅತಂತ್ರ ಪರಿಸ್ಥಿತಿಯಲ್ಲಿದ್ದು ಕೂಡಲೇ ಕಲಾವಿದರಿಗೆ ಧನಸಹಾಯ ಹಾಗೂ ಪ್ರಾಯೋಜನೆಗಳನ್ನು ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಸಂಘದ ಅಧ್ಯಕ್ಷ ಜೋಸೆಫ್, ವೆಂಕಟೇಶ ಆಲ್ಕೋಡ್, ರಂಗಸ್ವಾಮಿ, ಲಕ್ಷ್ಮಣ ಮಂಡಲಗೇರ, ಸುಧಾಕರ, ವಿಜಯಕುಮಾರ, ವೆಂಕಟ ನರಸಿಂಹಲು, ನರಸಿಂಹಲು ಅರೋಲಿ, ತಿರುಪತಿ, ಅಯ್ಯಪ್ಪಸ್ವಾಮಿ, ಅನಿಲಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ವತಿಯಿಂದ ಧನಸಹಾಯ ಮಾಡಬೇಕು ಎಂದು ಒತ್ತಾಯಿಸಿ ವಿಜಿ ಕಲಾವಿದರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ರಂಗ ಪರಿಷತ್ಗೆ ಕಳೆದ ಮೂರು ವರ್ಷಗಳಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯ ನೀಡುತ್ತಿದ್ದು, ಈ ವರ್ಷ ಇದುವರೆಗೆ ಧನಸಹಾಯ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿಲ್ಲ. ರಾಜ್ಯದಾದ್ಯಂತ ಸಾವಿರಾರು ಸಂಘ ಸಂಸ್ಥೆಗಳು ಹಾಗೂ ಕಲಾವಿದರು ಧನಸಹಾಯಕ್ಕಾಗಿ ಕಾಯುವಂತಾಗಿದೆ. ಹಿಂದಿನ ಸರ್ಕಾರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಉದ್ದಟತನದಿಂದ ವರ್ತಿಸಿ ಕಲಾವಿದರು ಕಳ್ಳರೆಂದು ನಿಂದಿಸಿ ಧನಸಹಾಯವನ್ನು ನಿಲ್ಲಿಸಲು ಪ್ರಯತ್ನಿಸಿದ್ದರು.</p>.<p>ಈ ಸರ್ಕಾರ ಮೊದಲಿನಂತೆಯೆ ಧನಸಹಾಯಕ್ಕೆ ಅರ್ಜಿಗಳನ್ನು ಕರೆದು, ಧನ ಸಹಾಯವನ್ನು ಬಿಡುಗಡೆ ಮಾಡಿತ್ತು. ಆದರೆ, ಕೋವಿಡ್ ಕಾರಣದಿಂದ ಬಿಡುಗಡೆಯಾದ ಬಹುಭಾಗ ಹಣವನ್ನು ಸಂಘ ಸಂಸ್ಥೆಗಳಿಗೆ ನೀಡದೇ ತಡೆಹಿಡಿದ್ದರಿಂದ ಕಲಾವಿದರಿಗೆ ಸಮಸ್ಯೆಯಾಗಿದೆ ಎಂದು ದೂರಿದರು.</p>.<p>ಸರ್ಕಾರ ಇವರೆಗೂ ಸಂಘ ಸಂಸ್ಥೆಗಳಿಂದ ಮತ್ತು ಕಲಾವಿದರಿಂದ ಧನಸಹಾಯಕ್ಕಾಗಿ ಅರ್ಜಿಗಳನ್ನು ಕರೆದಿಲ್ಲ. ಕಲೆಯನ್ನೆ ನಂಬಿಕೊಂಡು ಬದುಕುತ್ತಿರುವ ಲಕ್ಷಾಂತರ ಕಲಾವಿದರ ಬದುಕು ಅತಂತ್ರ ಪರಿಸ್ಥಿತಿಯಲ್ಲಿದ್ದು ಕೂಡಲೇ ಕಲಾವಿದರಿಗೆ ಧನಸಹಾಯ ಹಾಗೂ ಪ್ರಾಯೋಜನೆಗಳನ್ನು ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.</p>.<p>ಸಂಘದ ಅಧ್ಯಕ್ಷ ಜೋಸೆಫ್, ವೆಂಕಟೇಶ ಆಲ್ಕೋಡ್, ರಂಗಸ್ವಾಮಿ, ಲಕ್ಷ್ಮಣ ಮಂಡಲಗೇರ, ಸುಧಾಕರ, ವಿಜಯಕುಮಾರ, ವೆಂಕಟ ನರಸಿಂಹಲು, ನರಸಿಂಹಲು ಅರೋಲಿ, ತಿರುಪತಿ, ಅಯ್ಯಪ್ಪಸ್ವಾಮಿ, ಅನಿಲಕುಮಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>