ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಕಲಾವಿದರಿಗೆ ಪ್ರೋತ್ಸಾಹ ಅಗತ್ಯ

Last Updated 5 ಅಕ್ಟೋಬರ್ 2020, 3:24 IST
ಅಕ್ಷರ ಗಾತ್ರ

ರಾಯಚೂರು: ಕಲೆಯನ್ನು ಉಳಿಸಿ ಬೆಳೆಸುವಲ್ಲಿ ಜಿಲ್ಲೆಯ ಕಲಾವಿದರು ಕೆಲಸ ಮಾಡುವ ಮೂಲಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಮುಖಂಡ ರವೀಂದ್ರ ಜಾಲ್ದಾರ ಹೇಳಿದರು.

ನಗರದ ಜೆ.ಸಿ ಭವನದಲ್ಲಿ ರಾಗ ರಂಜನಿ ಕಲಾ ಬಳಗದಿಂದ ಭಾನುವಾರ ಹಮ್ಮಿಕೊಳ್ಳಲಾದ ಗಾನ ನೃತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾಂಸ್ಕೃತಿಕ ಸಂಘಟನೆಯಿಂದ ಹಲವಾರು ಕಲಾವಿದರು ಕಲಾ ಸೇವೆ ಸಲ್ಲಿಸುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಕಲೆ, ಸಾಹಿತ್ಯ, ಸಂಗೀತ ಹಾಗೂ ಇತರೆ ಸಾಂಸ್ಕೃತಿಕ ಚಟುವಟಿಕೆಗಳು ಸ್ಥಗಿತಗೊಂಡ ಕಾರಣ ಅನೇಕ ಸಮಸ್ಯೆ ಎದುರಿಸುವಂತಾಗಿದೆ. ಆದರೆ ಜಿಲ್ಲೆಯ ಎಲ್ಲಾ ಕಲಾವಿದರು ಒಂದಾಗಿ ಸಂಘ ರಚನೆ ಮಾಡಿಕೊಂಡು ಸಾಂಸ್ಕೃತಿಕ ಮೆರವು ನೀಡುತ್ತಿರುವುದು ಸ್ವಾಗತಾರ್ಹ ಎಂದರು.

ಕಲಾವಿದ ಶರಣಪ್ಪ ಗೋನಾಳ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕ್ಷೇತ್ರ ಸ್ತಬ್ದವಾಗಿ ಕಲಾವಿದರಿಗೆ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ಧಾರೆ. ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ. ಎಲ್ಲಾ ಕಲಾವಿದರು ಒಟ್ಟಾಗಿ ಸಾಂಸ್ಕೃತಿಕ ಶ್ರೀಮಂತಿಕೆ ಹೆಚ್ಚಿಸಬೇಕಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ಕಲಾವಿದರ ಸಂಘದ ಗೌರವ ಅಧ್ಯಕ್ಷ ವೆಂಕಟೇಶ ಆಲ್ಕೋಡ, ಸುಗುರೇಶ ಅಸ್ಕಿಹಾಳ, ವೀರೇಂದ್ರ ಪಾಟೀಲ, ಮಹಾಲಕ್ಷ್ಮೀ, ಮೋಹನ ವಕೀಲ, ನಜೀರ ಸಾಬ್, ಹನುಮಯ್ಯ ನಾಯಕ, ಅನ್ನಪೂರ್ಣ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT