<p><strong>ರಾಯಚೂರು: </strong>ಬಾಕಿ ವೇತನ ಪಾತಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಬುಧವಾರ ಪ್ರತಿಭಟನೆ ನಡೆಸಿತು.</p>.<p>ನಗರದ ಸಾರ್ವಜನಿಕ ಉದ್ಯಾನದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೂ ಮೆರವಣಿಗೆ ನಡೆಸಿ ಗಮನ ಸೆಳೆದರು.</p>.<p>ಮೂರ ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಉಪಜೀವನ ನಡೆಸುವುದು ದುಸ್ತರವಾಗಿದ್ದು, ಕೂಡಲೇ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಸರ್ಕಾರಿ ಆಸ್ಪತ್ರೆ ರಿಮ್ಸ್, ತಾಲ್ಲೂಕು ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿಶ್ರಾಂತಿ ಕೊಠಡಿಗಳನ್ನು ನಿರ್ಮಾಣ ಮಾಡಬೇಕು. ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನವನ್ನು ಜಮಾಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಆಶಾ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ಸಿಗುವಂತಾಗಬೇಕು. ಕಿರುಕುಳ ತಪ್ಪಿಸಬೇಕು. ಮದುವೆ ಸಮಾರಂಭ ಸೇರಿದಂತೆ ಇತರೆ ತುರ್ತು ಕಾರಣಗಳಿಗೆ ರಜೆ ಪಡೆದುಕೊಳ್ಳಲು ಅವಕಾಶ ಒದಗಿಸಬೇಕು ಎಂದರು.</p>.<p>ಅನಗತ್ಯವಾಗಿ ಆರ್ಐ ಸಮೀಕ್ಷೆ ಮಾಡಿಸುವುದು ಸರಿಯಾದ ಕ್ರಮವಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಆಶಾ ಕುಂದುಕೊರತೆ ನಿವಾರಣೆ ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೇಶ ಎನ್.ಎಸ್. ಶರಣಪ್ಪ ಉದ್ಭಾಳ, ಚನ್ನಬಸವ ಜಾನೇಕಲ್, ಮಹೇಶ ಸಿ., ಈರಮ್ಮ.ರಾಧಾ, ಬೀಮಮ್ಮ, ಲಕ್ಷ್ಮೀ ನರಸುಬಾಯಿ, ಗೌರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಬಾಕಿ ವೇತನ ಪಾತಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಬುಧವಾರ ಪ್ರತಿಭಟನೆ ನಡೆಸಿತು.</p>.<p>ನಗರದ ಸಾರ್ವಜನಿಕ ಉದ್ಯಾನದಿಂದ ಜಿಲ್ಲಾ ಪಂಚಾಯಿತಿ ಕಚೇರಿವರೆಗೂ ಮೆರವಣಿಗೆ ನಡೆಸಿ ಗಮನ ಸೆಳೆದರು.</p>.<p>ಮೂರ ತಿಂಗಳಿಂದ ವೇತನ ನೀಡಿಲ್ಲ. ಇದರಿಂದ ಉಪಜೀವನ ನಡೆಸುವುದು ದುಸ್ತರವಾಗಿದ್ದು, ಕೂಡಲೇ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಸರ್ಕಾರಿ ಆಸ್ಪತ್ರೆ ರಿಮ್ಸ್, ತಾಲ್ಲೂಕು ಆಸ್ಪತ್ರೆ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ವಿಶ್ರಾಂತಿ ಕೊಠಡಿಗಳನ್ನು ನಿರ್ಮಾಣ ಮಾಡಬೇಕು. ಪ್ರತಿ ತಿಂಗಳು ನಿಗದಿತ ದಿನಾಂಕದೊಳಗೆ ವೇತನವನ್ನು ಜಮಾಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ಆಶಾ ಕಾರ್ಯಕರ್ತೆಯರಿಗೆ ಸೂಕ್ತ ರಕ್ಷಣೆ ಸಿಗುವಂತಾಗಬೇಕು. ಕಿರುಕುಳ ತಪ್ಪಿಸಬೇಕು. ಮದುವೆ ಸಮಾರಂಭ ಸೇರಿದಂತೆ ಇತರೆ ತುರ್ತು ಕಾರಣಗಳಿಗೆ ರಜೆ ಪಡೆದುಕೊಳ್ಳಲು ಅವಕಾಶ ಒದಗಿಸಬೇಕು ಎಂದರು.</p>.<p>ಅನಗತ್ಯವಾಗಿ ಆರ್ಐ ಸಮೀಕ್ಷೆ ಮಾಡಿಸುವುದು ಸರಿಯಾದ ಕ್ರಮವಲ್ಲ. ಪ್ರತಿ ಮೂರು ತಿಂಗಳಿಗೊಮ್ಮೆ ಆಶಾ ಕುಂದುಕೊರತೆ ನಿವಾರಣೆ ಸಭೆ ಆಯೋಜಿಸಬೇಕು ಎಂದು ಒತ್ತಾಯಿಸಲಾಯಿತು.</p>.<p>ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿರೇಶ ಎನ್.ಎಸ್. ಶರಣಪ್ಪ ಉದ್ಭಾಳ, ಚನ್ನಬಸವ ಜಾನೇಕಲ್, ಮಹೇಶ ಸಿ., ಈರಮ್ಮ.ರಾಧಾ, ಬೀಮಮ್ಮ, ಲಕ್ಷ್ಮೀ ನರಸುಬಾಯಿ, ಗೌರಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>