ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ವಾಹನ ಸಂಚರಿಸುವ ಕಡೆಗಳಲ್ಲಿ ಜನದಟ್ಟಣೆ ಆಗದಂತೆ ನಿಯಂತ್ರಣ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪಾರ್ಥಿವ ಶರೀರದ ಹತ್ತಿರ ಹೋಗುವುದಕ್ಕೆ ಸಾರ್ವಜನಿಕರಿಗೆ ಆವಕಾಶ ಇರುವುದಿಲ್ಲ. ಹೂಗುಚ್ಛಗಳನ್ನು ಹಿಡಿದು ನಿಂತಿರುವವರು ಆ್ಯಂಬುಲೆನ್ಸ್ ಹತ್ತಿರ ಹೋಗುವುದಕ್ಕೆ ಪ್ರಯತ್ನ ಮಾಡಬಾರದು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡುತ್ತಿದ್ದಾರೆ.