<p><strong>ಸಿರವಾರ:</strong> ‘ಆಶ್ರಯ ಮನೆ ವಿತರಣೆಯಲ್ಲಿ ಅಕ್ರಮವೆಸಗಿರುವ ಗ್ರಾ.ಪಂ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ತನಿಖೆ ನಡೆಸಿ ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ನೊಡಲ್ ಅಧಿಕಾರಿ ಅನಿಲಕುಮಾರ ಅವರಿಗೆ ಮನವಿ ಸಲ್ಲಿಸಿದರು. </p>.<p>ತಾ.ಪಂ.ಇಒ ಅವರಿಗೆ ಬರೆದ ಮನವಿ ಪತ್ರದಲ್ಲಿ, ‘ಹೀರಾ, ಮಲ್ಲಟ, ಬಲ್ಲಟಗಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಎಂಎವೈ ಅಡಿಯಲ್ಲಿ ಮಂಜೂರಾಗಿರುವ ಆಶ್ರಯ ಮನೆಗಳ ಹಣವನ್ನು ಅನಾಮಧೇಯ ವ್ಯಕ್ತಿಗಳ ಖಾತೆಗೆ ಜಮಾ ಮಾಡಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಕ್ರಮದಲ್ಲಿ ಪಾಲ್ಗೊಂಡ ಗ್ರಾ.ಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ದ ಕ್ರಮಕೈಗೊಂಡು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವಂತೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಯಿತು.</p>.<p>ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ರಾಘವೇಂದ್ರ, ವೆಂಕಟೇಶ ಸಂಕ್ರಿ ಸೇರಿದಂತೆ ಆಶ್ರಯ ಮನೆಗಳ ಫಲಾನುಭವಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ:</strong> ‘ಆಶ್ರಯ ಮನೆ ವಿತರಣೆಯಲ್ಲಿ ಅಕ್ರಮವೆಸಗಿರುವ ಗ್ರಾ.ಪಂ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ದ ತನಿಖೆ ನಡೆಸಿ ತಪ್ಪಿತಸ್ಥರನ್ನು ಅಮಾನತುಗೊಳಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣ ಪದಾಧಿಕಾರಿಗಳು ತಾಲ್ಲೂಕು ಪಂಚಾಯಿತಿ ನೊಡಲ್ ಅಧಿಕಾರಿ ಅನಿಲಕುಮಾರ ಅವರಿಗೆ ಮನವಿ ಸಲ್ಲಿಸಿದರು. </p>.<p>ತಾ.ಪಂ.ಇಒ ಅವರಿಗೆ ಬರೆದ ಮನವಿ ಪತ್ರದಲ್ಲಿ, ‘ಹೀರಾ, ಮಲ್ಲಟ, ಬಲ್ಲಟಗಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಪಿಎಂಎವೈ ಅಡಿಯಲ್ಲಿ ಮಂಜೂರಾಗಿರುವ ಆಶ್ರಯ ಮನೆಗಳ ಹಣವನ್ನು ಅನಾಮಧೇಯ ವ್ಯಕ್ತಿಗಳ ಖಾತೆಗೆ ಜಮಾ ಮಾಡಿ ಅಕ್ರಮ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಅಕ್ರಮದಲ್ಲಿ ಪಾಲ್ಗೊಂಡ ಗ್ರಾ.ಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ದ ಕ್ರಮಕೈಗೊಂಡು ಅರ್ಹ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವಂತೆ ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಲಾಯಿತು.</p>.<p>ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ) ಬಣದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ರಾಘವೇಂದ್ರ, ವೆಂಕಟೇಶ ಸಂಕ್ರಿ ಸೇರಿದಂತೆ ಆಶ್ರಯ ಮನೆಗಳ ಫಲಾನುಭವಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>