ಮುದಗಲ್: ಸಮೀಪದ ತೊಡಕಿ ಗ್ರಾಮದಲ್ಲಿ ಹಳೆ ವೈಷಮ್ಯದ ಕಾರಣಕ್ಕೆ ಚಾಕುವಿನಿಂದ ಇರಿದು ಇಬ್ಬರ ಕೊಲೆಗೆ ಯತ್ನಿಸಲಾಗಿದೆ.
ಶುಕ್ರವಾರ ನಡೆದ ಘಟನೆಯಲ್ಲಿ ಬಸವರಾಜ ಮತ್ತು ವೀರೇಶ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೀರೇಶ ಸ್ಥಿತಿ ಗಂಭೀರವಾದ ಕಾರಣ ಗಂಗಾವತಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಮುದಗಲ್ ಪೊಲೀಸ್ ಠಾಣೆಯಲ್ಲಿ ನಿರುಪಾದಿ ಗವಿಸಿದ್ದಪ್ಪ, ಹನುಮಂತ ಹುಲಿಗೆಪ್ಪ ಹಾಗೂ ಮೌನೇಶ ಹುಲಿಗೆಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.