<p><strong>ಮಾನ್ವಿ: </strong>ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆಗೆ ತಹಶೀಲ್ದಾರ್ ಕುಮ್ಮಕ್ಕು ನೀಡಿದ್ದಾರೆ ಎನ್ನಲಾದ ಸಂಭಾಷಣೆ ಇರುವ ಆಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ಆಡಿಯೊ ಬಹಿರಂಗ ಆಗುತ್ತಿದ್ದಂತೆಯೇ ತಹಶೀಲ್ದಾರ್ ಸಂತೋಷರಾಣಿ ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಗುರುವಾರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.</p>.<p>‘ತಹಶೀಲ್ದಾರ್ ಸಂತೋಷರಾಣಿ ಅಕ್ರಮ ಮರಳು ದಂಧೆಕೋರರ ಜತೆಗೆ ಶಾಮೀಲಾಗಿ ಒಂದು ತಿಂಗಳಿಗೆ ಪ್ರತಿ ಟಿಪ್ಪರ್ಗೆ ₹30 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಲು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಹಶೀಲ್ದಾರ್ ಅಡಿಯೊ ಸಂಭಾಷಣೆ ಕುರಿತು ಸಮಗ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಪ್ರಧಾನ ಸಂಚಾಲಕ ಅರಳಪ್ಪ ಯದ್ದಲದಿನ್ನಿ, ಸಂಚಾಲಕರಾದ ಪಿ.ಅನಿಲ್ಕುಮಾರ, ಪ್ರಭುರಾಜ ಕೊಡ್ಲಿ, ಎಸ್.ಎಂ.ಶಾನವಾಜ್, ಹನುಮಂತ ಕೋಟೆ, ರಮೇಶ ಕರೇಗುಡ್ಡ, ಪ್ರದೀಪ ಕಪಗಲ್, ಎಂ.ಡಿ.ನುಸ್ರತ್, ಶೇಖ್ ಮೈನುದ್ದೀನ್ ಮತ್ತು ಸಾಬಿರ್ ಪಾಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ: </strong>ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆಗೆ ತಹಶೀಲ್ದಾರ್ ಕುಮ್ಮಕ್ಕು ನೀಡಿದ್ದಾರೆ ಎನ್ನಲಾದ ಸಂಭಾಷಣೆ ಇರುವ ಆಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.</p>.<p>‘ಆಡಿಯೊ ಬಹಿರಂಗ ಆಗುತ್ತಿದ್ದಂತೆಯೇ ತಹಶೀಲ್ದಾರ್ ಸಂತೋಷರಾಣಿ ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಒತ್ತಾಯಿಸಿ ದಲಿತಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಗುರುವಾರ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದರು.</p>.<p>‘ತಹಶೀಲ್ದಾರ್ ಸಂತೋಷರಾಣಿ ಅಕ್ರಮ ಮರಳು ದಂಧೆಕೋರರ ಜತೆಗೆ ಶಾಮೀಲಾಗಿ ಒಂದು ತಿಂಗಳಿಗೆ ಪ್ರತಿ ಟಿಪ್ಪರ್ಗೆ ₹30 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ನೈಸರ್ಗಿಕ ಸಂಪತ್ತು ಲೂಟಿ ಮಾಡಲು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ತಹಶೀಲ್ದಾರ್ ಅಡಿಯೊ ಸಂಭಾಷಣೆ ಕುರಿತು ಸಮಗ್ರ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಪ್ರಧಾನ ಸಂಚಾಲಕ ಅರಳಪ್ಪ ಯದ್ದಲದಿನ್ನಿ, ಸಂಚಾಲಕರಾದ ಪಿ.ಅನಿಲ್ಕುಮಾರ, ಪ್ರಭುರಾಜ ಕೊಡ್ಲಿ, ಎಸ್.ಎಂ.ಶಾನವಾಜ್, ಹನುಮಂತ ಕೋಟೆ, ರಮೇಶ ಕರೇಗುಡ್ಡ, ಪ್ರದೀಪ ಕಪಗಲ್, ಎಂ.ಡಿ.ನುಸ್ರತ್, ಶೇಖ್ ಮೈನುದ್ದೀನ್ ಮತ್ತು ಸಾಬಿರ್ ಪಾಷಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>