ಬಾಲ್ಯ ವಿವಾಹ ಮಾಡಲು ಪೋಷಕರು ಶನಿವಾರ ರಾತ್ರಿ ಸಕಲ ತಯಾರಿ ನಡೆಸಿದ್ದರು. ಈ ಬಗ್ಗೆ ಸ್ಥಳೀಯರು ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ.ಎನ್.ಚೇತನ್ ನೇತೃತ್ವದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ಮದುವೆ ಮನೆಗೆ ತೆರಳಿದೆ. ಈ ವೇಳೆ, ಪಾಲಕರು ಹಾಗೂ ಸಂಬಂಧಿಕರು ಅಧಿಕಾರಿಗಳ ವಿರುದ್ಧ ಕೂಗಾಡಿ ಆಕ್ಷೇಪ ವ್ಯಕ್ತಪಡಿಸಿದರು.