<p><strong>ರಾಯಚೂರು</strong>: ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚಗಳಿಂದ ಮದ್ಯಮವರ್ಗದ ಪ್ರಗತಿಗೆ ಹಿನ್ನಡೆಯಾಗುತ್ತಿದ್ದು ಪ್ರತಿಯೊಬ್ಬರೂ ಆರೋಗ್ಯ ವಿಮೆ ಹೊಂದುವುದು ಅವಶ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ತಿಳಿಸಿದರು.</p>.<p>ನಗರದ ಸ್ಟೇಶನ್ ಬಜಾರ್ ಶಾಲೆಯಲ್ಲಿ ಈಚೆಗೆ ನಡೆದ ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಜಿಲ್ಲೆಯಲ್ಲಿ ಸುಮಾರು 1,000 ನಿರ್ಗತಿಕರಿಗೆ ಪ್ರತೀ ತಿಂಗಳು ಮಾಸಾಶನ ನೀಡಲಾಗುತ್ತಿದೆ. 26 ಸರ್ಕಾರಿ ಶಾಲೆಗಳಿಗೆ ಡೆಸ್ಕ್, ಬೆಂಚ್ ನೀಡಲಾಗಿದೆ. ವೈದ್ಯಕೀಯ ಸಹಾಯಧನ, ವಾತ್ಸಲ್ಯ ಕಿಟ್ ನೀಡಲಾಗಿದ್ದು ಅನೇಕ ಜನಪರ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಸದಸ್ಯರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದ್ದುಕೇವಲ ₹100 ವೆಚ್ಚದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ರಕ್ಷಣೆ ಒದಗಿಸುವ ಯೋಜನೆಯಾಗಿದ್ದು ಜಿಲ್ಲೆಯಲ್ಲಿ ಲಕ್ಷ ಜನರ ನೊಂದಾಯಿಸುವ ಗುರಿ ಹೊಂದಿದ್ದೇವೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯೋಜನಾಧಿಕಾರಿ ರಘುಪತಿಗೌಡ, ವಿಮಾ ಸಮನ್ವಾಧಿಕಾರಿ ಕಲ್ಲಪ್ಪ, ಮೇಲ್ವಿಚಾರಕ ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಹೆಚ್ಚುತ್ತಿರುವ ವೈದ್ಯಕೀಯ ವೆಚ್ಚಗಳಿಂದ ಮದ್ಯಮವರ್ಗದ ಪ್ರಗತಿಗೆ ಹಿನ್ನಡೆಯಾಗುತ್ತಿದ್ದು ಪ್ರತಿಯೊಬ್ಬರೂ ಆರೋಗ್ಯ ವಿಮೆ ಹೊಂದುವುದು ಅವಶ್ಯ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷ ಕುಮಾರ ತಿಳಿಸಿದರು.</p>.<p>ನಗರದ ಸ್ಟೇಶನ್ ಬಜಾರ್ ಶಾಲೆಯಲ್ಲಿ ಈಚೆಗೆ ನಡೆದ ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಜಿಲ್ಲೆಯಲ್ಲಿ ಸುಮಾರು 1,000 ನಿರ್ಗತಿಕರಿಗೆ ಪ್ರತೀ ತಿಂಗಳು ಮಾಸಾಶನ ನೀಡಲಾಗುತ್ತಿದೆ. 26 ಸರ್ಕಾರಿ ಶಾಲೆಗಳಿಗೆ ಡೆಸ್ಕ್, ಬೆಂಚ್ ನೀಡಲಾಗಿದೆ. ವೈದ್ಯಕೀಯ ಸಹಾಯಧನ, ವಾತ್ಸಲ್ಯ ಕಿಟ್ ನೀಡಲಾಗಿದ್ದು ಅನೇಕ ಜನಪರ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಪ್ರಸಕ್ತ ಸಾಲಿನಲ್ಲಿ ಸದಸ್ಯರ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಸಂಪೂರ್ಣ ಸುರಕ್ಷಾ ಮತ್ತು ಆರೋಗ್ಯ ರಕ್ಷಾ ಕಾರ್ಯಕ್ರಮ ಅನುಷ್ಠಾನ ಮಾಡುತ್ತಿದ್ದುಕೇವಲ ₹100 ವೆಚ್ಚದಲ್ಲಿ ಸಂಘದ ಸದಸ್ಯರಿಗೆ ಆರೋಗ್ಯ ರಕ್ಷಣೆ ಒದಗಿಸುವ ಯೋಜನೆಯಾಗಿದ್ದು ಜಿಲ್ಲೆಯಲ್ಲಿ ಲಕ್ಷ ಜನರ ನೊಂದಾಯಿಸುವ ಗುರಿ ಹೊಂದಿದ್ದೇವೆ. ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ತಾಲ್ಲೂಕಿನ ಯೋಜನಾಧಿಕಾರಿ ರಘುಪತಿಗೌಡ, ವಿಮಾ ಸಮನ್ವಾಧಿಕಾರಿ ಕಲ್ಲಪ್ಪ, ಮೇಲ್ವಿಚಾರಕ ನಾಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>