<p><strong>ಲಿಂಗಸುಗೂರು:</strong> ‘ಡಿಫ್ತೀರಿಯಾ ನಿಯಂತ್ರಣಕ್ಕೆ 5 ರಿಂದ 16 ವಯೋಮಾನದ ಮಕ್ಕಳಿಗೆ ವಿಶೇಷ ಶಾಲಾ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅವಶ್ಯ’ ಎಂದು ಉಪ ವಿಭಾಗಾಧಿಕಾರಿ ಡಾ. ದಿಲೀಶ್ ಸಸಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಕಿರಿಯ ಮಹಾವಿದ್ಯಾಲಯದಲ್ಲಿ (ಪ್ರೌಢಶಾಲೆ ವಿಭಾಗ) ಈಚೆಗೆ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ‘ಇಂದಿನಿಂದ ಡಿಸೆಂಬರ್ 31ರ ವರೆಗೆ ಲಸಿಕೆ ಹಾಕಲಾಗುವುದು. ಪ್ರತಿ ಮಗುವಿಗೆ ಲಸಿಕೆ ಹಾಕಿಸುವುದು ಕಡ್ಡಾಯ. ಹೀಗಾಗಿ ಪಾಲಕರು, ಸಂಘ ಸಂಸ್ಥೆಗಳು, ಪ್ರತಿನಿಧಿಗಳು<br />ಕೂಡ ಜಾಗೃತಿ ಮೂಡಿಸುವ ಜೊತೆಗೆ ಲಸಿಕೆ ಹಾಕಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ ಮಾತನಾಡಿ, ‘ಪ್ರಾಥಮಿಕ, ಪ್ರೌಢಶಾಲೆಗಳಿಂದ ಹೊರಗುಳಿದ ಮಕ್ಕಳಿಗೆ ಸಮೀಪದ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಲಾಗಿದೆ. ಗಂಟಲಮಾರಿ, ನಾಯಿಕೆಮ್ಮು ಮತ್ತು ಧನುರ್ವಾಯು ರೋಗವನ್ನು ತಡೆಯವ ಉದ್ದೇಶದಿಂದ ಲಸಿಕೆ<br />ಹಾಕಲಾಗುತ್ತಿದೆ’ ಎಂದು ಅವರು ಹೇಳಿದರು.</p>.<p>ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಷಿ, ಡಾ.ಸುವರ್ಣ, ಡಾ.ಆಯಿಶಾ ಬಿರಾದರ, ಉಪ ಪ್ರಾಚಾರ್ಯ ಹೊನ್ನಪ್ಪ, ಮೋನಮ್ಮ, ಮುಬಿನಾ, ನಾಗರತ್ನಾ, ಸಚಿನ್, ಪ್ರಕಾಶ, ರಾಜಾರಾಮಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ‘ಡಿಫ್ತೀರಿಯಾ ನಿಯಂತ್ರಣಕ್ಕೆ 5 ರಿಂದ 16 ವಯೋಮಾನದ ಮಕ್ಕಳಿಗೆ ವಿಶೇಷ ಶಾಲಾ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಯಶಸ್ವಿಗೆ ಸಾರ್ವಜನಿಕರ ಸಹಕಾರ ಅವಶ್ಯ’ ಎಂದು ಉಪ ವಿಭಾಗಾಧಿಕಾರಿ ಡಾ. ದಿಲೀಶ್ ಸಸಿ ಹೇಳಿದರು.</p>.<p>ಇಲ್ಲಿನ ಸರ್ಕಾರಿ ಕಿರಿಯ ಮಹಾವಿದ್ಯಾಲಯದಲ್ಲಿ (ಪ್ರೌಢಶಾಲೆ ವಿಭಾಗ) ಈಚೆಗೆ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ‘ಇಂದಿನಿಂದ ಡಿಸೆಂಬರ್ 31ರ ವರೆಗೆ ಲಸಿಕೆ ಹಾಕಲಾಗುವುದು. ಪ್ರತಿ ಮಗುವಿಗೆ ಲಸಿಕೆ ಹಾಕಿಸುವುದು ಕಡ್ಡಾಯ. ಹೀಗಾಗಿ ಪಾಲಕರು, ಸಂಘ ಸಂಸ್ಥೆಗಳು, ಪ್ರತಿನಿಧಿಗಳು<br />ಕೂಡ ಜಾಗೃತಿ ಮೂಡಿಸುವ ಜೊತೆಗೆ ಲಸಿಕೆ ಹಾಕಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ ಮಾತನಾಡಿ, ‘ಪ್ರಾಥಮಿಕ, ಪ್ರೌಢಶಾಲೆಗಳಿಂದ ಹೊರಗುಳಿದ ಮಕ್ಕಳಿಗೆ ಸಮೀಪದ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆ ಹಾಕಿಸಲು ವ್ಯವಸ್ಥೆ ಮಾಡಲಾಗಿದೆ. ಗಂಟಲಮಾರಿ, ನಾಯಿಕೆಮ್ಮು ಮತ್ತು ಧನುರ್ವಾಯು ರೋಗವನ್ನು ತಡೆಯವ ಉದ್ದೇಶದಿಂದ ಲಸಿಕೆ<br />ಹಾಕಲಾಗುತ್ತಿದೆ’ ಎಂದು ಅವರು ಹೇಳಿದರು.</p>.<p>ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಷಿ, ಡಾ.ಸುವರ್ಣ, ಡಾ.ಆಯಿಶಾ ಬಿರಾದರ, ಉಪ ಪ್ರಾಚಾರ್ಯ ಹೊನ್ನಪ್ಪ, ಮೋನಮ್ಮ, ಮುಬಿನಾ, ನಾಗರತ್ನಾ, ಸಚಿನ್, ಪ್ರಕಾಶ, ರಾಜಾರಾಮಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>