ರಾಯಚೂರು: ‘ಯಾವುದೇ ಹೆಣ್ಣುಮಕ್ಕಳಿಗೆ ಅನ್ಯಾಯ ಆಗಬಾರದು. ನಾವೆಲ್ಲ ಹೆಣ್ಣುಮಕ್ಕಳ ಪರವಾಗಿದ್ದೇವೆ. ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಯುತ್ತಿರುವುದರಿಂದ ಆ ಬಗ್ಗೆ ಏನೂ ಹೇಳುವುದು ತಪ್ಪಾಗುತ್ತದೆ’ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಮಂಗಳವಾರ ಮಸ್ಕಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಪ್ರಕರಣದಲ್ಲಿ ಯಾರಿಗೂ ಅನ್ಯಾಯವಾಗಬಾರದು. ತನಿಖೆ ನಂತರ ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ’ ಎಂದರು.
‘ಯಾವುದೇ ಹೆಣ್ಣುಮಕ್ಕಳಿಗೆ ಕಾನೂನಾತ್ಮಕವಾಗಿ ಸಿಗಬೇಕಾದ ರಕ್ಷಣೆಯನ್ನು ವಾಲ್ಮೀಕಿ ಸಮಾಜದಿಂದಲೂ ಒದಗಿಸಲಾಗುವುದು’ ಎಂದು ಹೇಳಿದರು.