<p><strong>ಸಿಂಧನೂರು (ರಾಯಚೂರು ಜಿಲ್ಲೆ)</strong>: ನಗರದ ಕುಷ್ಟಗಿ ರಸ್ತೆ ಬಳಿಯ ಜಾನುವಾರು ಸಂತೆಗೆ ಬರುವ ಜಾನುವಾರುಗಳನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಆರೋಪಿಸಿ ಜಾನುವಾರು ರಕ್ಷಣೆಗೆ ಮುಂದಾದ ಬಜರಂಗದಳದ ಕಾರ್ಯಕರ್ತರ ಮೇಲೆ ವ್ಯಾಪಾರಿಗಳು ಹಲ್ಲೆ ನಡೆಸಿದ್ದು, ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರತಿ ಮಂಗಳವಾರ ಜಾನುವಾರು ಸಂತೆ ನಡೆಯುತ್ತದೆ. ಸಂತೆಗೆ ಸೋಮವಾರವೇ ಜಾನುವಾರು ಹೊಡೆದುಕೊಂಡು ಬರಲಾಗುತ್ತದೆ. ಜಾನುವಾರ ಸಂತೆ ನಡೆಯುವ ಸ್ಥಳಕ್ಕೆ ಸೋಮವಾರ ತೆರಳಿದ ಬಜರಂಗದಳದ ತಾಲ್ಲೂಕು ಸಂಚಾಲಕ ಮನೋಹರ, ನಗರ ಸಂಚಾಲಕ ಶಿವಕುಮಾರ, ಕಾರ್ಯಕರ್ತರಾದ ಅನಿಲಕುಮಾರ, ದೇವರಾಜ ಸೇರಿ 8 ಜನರು ಜಾನುವಾರು ಕಸಾಯಿಖಾನೆಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ವ್ಯಾಪಾರಿಗಳಿಗೆ ಅಡ್ಡಿಪಡಿಸಿದ್ದಾರೆ.</p>.<p>ಆಗ ವ್ಯಾಪಾರಿಗಳು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ವ್ಯಾಪಾರಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಬಿ.ಎಸ್.ತಳವಾರ, ಪೊಲೀಸ್ ಇನ್ಸ್ಪೆಕ್ಟರ್ ದುರುಗಪ್ಪ ಡೊಳ್ಳಿನ್ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು (ರಾಯಚೂರು ಜಿಲ್ಲೆ)</strong>: ನಗರದ ಕುಷ್ಟಗಿ ರಸ್ತೆ ಬಳಿಯ ಜಾನುವಾರು ಸಂತೆಗೆ ಬರುವ ಜಾನುವಾರುಗಳನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಆರೋಪಿಸಿ ಜಾನುವಾರು ರಕ್ಷಣೆಗೆ ಮುಂದಾದ ಬಜರಂಗದಳದ ಕಾರ್ಯಕರ್ತರ ಮೇಲೆ ವ್ಯಾಪಾರಿಗಳು ಹಲ್ಲೆ ನಡೆಸಿದ್ದು, ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಪ್ರತಿ ಮಂಗಳವಾರ ಜಾನುವಾರು ಸಂತೆ ನಡೆಯುತ್ತದೆ. ಸಂತೆಗೆ ಸೋಮವಾರವೇ ಜಾನುವಾರು ಹೊಡೆದುಕೊಂಡು ಬರಲಾಗುತ್ತದೆ. ಜಾನುವಾರ ಸಂತೆ ನಡೆಯುವ ಸ್ಥಳಕ್ಕೆ ಸೋಮವಾರ ತೆರಳಿದ ಬಜರಂಗದಳದ ತಾಲ್ಲೂಕು ಸಂಚಾಲಕ ಮನೋಹರ, ನಗರ ಸಂಚಾಲಕ ಶಿವಕುಮಾರ, ಕಾರ್ಯಕರ್ತರಾದ ಅನಿಲಕುಮಾರ, ದೇವರಾಜ ಸೇರಿ 8 ಜನರು ಜಾನುವಾರು ಕಸಾಯಿಖಾನೆಗೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ ಎಂದು ವ್ಯಾಪಾರಿಗಳಿಗೆ ಅಡ್ಡಿಪಡಿಸಿದ್ದಾರೆ.</p>.<p>ಆಗ ವ್ಯಾಪಾರಿಗಳು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ವ್ಯಾಪಾರಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಡಿವೈಎಸ್ಪಿ ಬಿ.ಎಸ್.ತಳವಾರ, ಪೊಲೀಸ್ ಇನ್ಸ್ಪೆಕ್ಟರ್ ದುರುಗಪ್ಪ ಡೊಳ್ಳಿನ್ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>