<p><strong>ರಾಯಚೂರು: </strong>ನಗರದ ತಿಮ್ಮಾಪುರಪೇಟೆ ಬಡಾವಣೆಯಲ್ಲಿರುವ ಬಾಲಮಾರೆಮ್ಮ ದೇವಿಯ ಜಾತ್ರಾ ಮಹೋತ್ಸವ ಜುಲೈ 23 ರಿಂದ ಆರಂಭವಾಗಲಿದೆ. ಬುಧವಾರ ಹಾಗೂ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.</p>.<p>23 ರಂದು ಬೆಳಿಗ್ಗೆ ಬಾಲಮಾರೆಮ್ಮ ದೇವಿಗೆ ವಿಶೇಷ ಅಭಿಷೇಕ, ಪಲ್ಲಕ್ಕಿ ಸೇವೆ ಹಾಗೂ ರಾತ್ರಿ ತೊಟ್ಟಿಲು ಕಾರ್ಯಕ್ರಮಗಳು ನೆರವೇರಲಿವೆ. ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ ದೇವಿಗೆ ಭಕ್ತರಿಂದ ಕುಂಭವೇಳ, ಸಂಜೆ 6 ಕ್ಕೆ ದೇವಿಗೆ ವಿಶೇಷ ಪೂಜೆ ಹಾಗೂ ಉಚ್ಛಾಯಿ ನಡೆಯಲಿದೆ.</p>.<p>ಗುರುವಾರ ಬೆಳಿಗ್ಗೆ ವಿಶೇಷ ಪೂಜೆ, ಮಧ್ಯಾಹ್ನ 12 ಗಂಟೆಗೆ ತಿಮ್ಮಾಪುರಪೇಟೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕೈ ಕಲ್ಲು, ಉಸುಕಿನ ಚೀಲ ಎತ್ತುವ ಸ್ಪರ್ಧೆಗಳು ನಡೆಯಲಿವೆ. ಗಣ್ಯರಿಂದ ಬಹುಮಾನ ವಿತರಣೆ ಜರುಗಲಿದೆ. ಸಂಜೆ 7 ಕ್ಕೆ ಬಾಲಮಾರೆಮ್ಮ ದೇವಿಯ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ.</p>.<p>ಮಹಾರಥೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಸಾನಿಧ್ಯ ವಹಿಸಲಿದ್ದಾರೆ. ರಾಜಕೀಯ ಮುಖಂಡರು, ವಿವಿಧ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನಗರದ ತಿಮ್ಮಾಪುರಪೇಟೆ ಬಡಾವಣೆಯಲ್ಲಿರುವ ಬಾಲಮಾರೆಮ್ಮ ದೇವಿಯ ಜಾತ್ರಾ ಮಹೋತ್ಸವ ಜುಲೈ 23 ರಿಂದ ಆರಂಭವಾಗಲಿದೆ. ಬುಧವಾರ ಹಾಗೂ ಗುರುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.</p>.<p>23 ರಂದು ಬೆಳಿಗ್ಗೆ ಬಾಲಮಾರೆಮ್ಮ ದೇವಿಗೆ ವಿಶೇಷ ಅಭಿಷೇಕ, ಪಲ್ಲಕ್ಕಿ ಸೇವೆ ಹಾಗೂ ರಾತ್ರಿ ತೊಟ್ಟಿಲು ಕಾರ್ಯಕ್ರಮಗಳು ನೆರವೇರಲಿವೆ. ಬುಧವಾರ ಬೆಳಿಗ್ಗೆಯಿಂದ ಸಂಜೆವರೆಗೂ ದೇವಿಗೆ ಭಕ್ತರಿಂದ ಕುಂಭವೇಳ, ಸಂಜೆ 6 ಕ್ಕೆ ದೇವಿಗೆ ವಿಶೇಷ ಪೂಜೆ ಹಾಗೂ ಉಚ್ಛಾಯಿ ನಡೆಯಲಿದೆ.</p>.<p>ಗುರುವಾರ ಬೆಳಿಗ್ಗೆ ವಿಶೇಷ ಪೂಜೆ, ಮಧ್ಯಾಹ್ನ 12 ಗಂಟೆಗೆ ತಿಮ್ಮಾಪುರಪೇಟೆ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕೈ ಕಲ್ಲು, ಉಸುಕಿನ ಚೀಲ ಎತ್ತುವ ಸ್ಪರ್ಧೆಗಳು ನಡೆಯಲಿವೆ. ಗಣ್ಯರಿಂದ ಬಹುಮಾನ ವಿತರಣೆ ಜರುಗಲಿದೆ. ಸಂಜೆ 7 ಕ್ಕೆ ಬಾಲಮಾರೆಮ್ಮ ದೇವಿಯ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಲಿದೆ.</p>.<p>ಮಹಾರಥೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಸ್ವಾಮೀಜಿಗಳು ಸಾನಿಧ್ಯ ವಹಿಸಲಿದ್ದಾರೆ. ರಾಜಕೀಯ ಮುಖಂಡರು, ವಿವಿಧ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>