ಈ ಮಾರ್ಗದಲ್ಲಿ ಮೂರು ರಸ್ತೆಗಳು ಸೇರುತ್ತಿದ್ದು, ಭಾನುವಾರ ಮಧ್ಯೆರಾತ್ರಿ ಈ ಕೃತ್ಯ ನಡೆಸಲಾಗಿದೆ. ಕಪ್ಪು ವಸ್ತ್ರಗಳಲ್ಲಿ ಗುಂಟು ಕಟ್ಟಿ, ಅವುಗಳ ಪಕ್ಕದಲ್ಲಿ ನಾಲ್ಕು ಮಣ್ಣಿನ ಗೊಂಬೆಗಳನ್ನು ಇಡಲಾಗಿದೆ. ಅವುಗಳಿಗೆ ಟಾಚನ್ ಪಿನ್ ಗಳನ್ನು ಚುಚ್ಚಲಾಗಿದೆ. ಅದರ ಜತೆಗೆ ನಿಂಬೆಹಣ್ಣು, ಕವಡೆ, ಈರುಳ್ಳಿ ಮೊಟ್ಟೆಗಳನ್ನು ಇರಿಸಿದ್ದು. ಹತ್ತಾರು ದೀಪಗಳನ್ನು ಹೊತ್ತಿಸಲಾಗಿದೆ. ನೋಡುವುದಕ್ಕೆ ಜನರು ಭಯ ಪಡುತ್ತಿದ್ದಾರೆ. ಇದು ಭಾನಾಮತಿ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ.