<p><strong>ರಾಯಚೂರು</strong>: 'ಬಸವಣ್ಣ, ನಾಡಿನ ಸಾಂಸ್ಕೃತಿಕ ನಾಯಕ. ಈ ನಾಡಿನ ಸಂಸ್ಕೃತಿಯನ್ನು ಬಸವ ತತ್ವದ ಮೂಲಕ ಅವಲೋಕಿಸಬೇಕಾಗುತ್ತದೆ’ ಎಂದು ಸಾಹಿತಿ ಸರ್ವಮಂಗಳ ಸಕ್ರಿ ಹೇಳಿದರು.</p>.<p>ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಬಸವಣ್ಣನವರ ಹೆಸರಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳಾಗುತ್ತಿವೆ. ಅಧ್ಯಯನ ಪೀಠಗಳಾಗುತ್ತಿವೆ. ಸಂಶೋಧನಾತ್ಮಕ ಪ್ರಬಂಧಗಳು ಮಂಡಿಸಲಾಗುತ್ತದೆ, ಇವೆಲ್ಲವುಗಳನ್ನು ಹೊರತುಪಡಿಸಿ ನಾಗರಿಕ ಸಮಾಜದ ನಿರ್ಮಾಣದ ಹಾದಿಯಲ್ಲಿ ಸಾಗುವಂತ ಪ್ರಯತ್ನಗಳು ಆಗಬೇಕು’ ಎಂದು ಹೇಳಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಬೇವಿನಬೆಂಚಿ ಅಧ್ಯಕ್ಷತೆ ವಹಿಸಿದ್ದರು.</p>.<p>ದಾನಮ್ಮ ಎಸ್., ನಾಗಪ್ಪ ಹೊರಪ್ಯಾಟಿ, ಈರಣ್ಣ ಬೆಂಗಾಲಿ, ದಂಡಪ್ಪ ಬಿರಾದಾರ, ರಾವುತರಾವ್ ಬರೂರ, ಪ್ರತಿಭಾ ಗೋನಾಳ, ವಸಂತ್ ಕುಮಾರ್, ರಾಮಣ್ಣ ಬೋಯರ್, ದೇವೇಂದ್ರಮ್ಮ, ಡಾ. ಬಿ. ವಿಜಯರಾಜೇಂದ್ರ, ಮಹೇಶ ಚೀಕಲಪರವಿ, ಕುಮಾರ ಸಂಜಿತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: 'ಬಸವಣ್ಣ, ನಾಡಿನ ಸಾಂಸ್ಕೃತಿಕ ನಾಯಕ. ಈ ನಾಡಿನ ಸಂಸ್ಕೃತಿಯನ್ನು ಬಸವ ತತ್ವದ ಮೂಲಕ ಅವಲೋಕಿಸಬೇಕಾಗುತ್ತದೆ’ ಎಂದು ಸಾಹಿತಿ ಸರ್ವಮಂಗಳ ಸಕ್ರಿ ಹೇಳಿದರು.</p>.<p>ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿ ಜಗಜ್ಯೋತಿ ಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.</p>.<p>‘ಬಸವಣ್ಣನವರ ಹೆಸರಿನಲ್ಲಿ ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆಗಳಾಗುತ್ತಿವೆ. ಅಧ್ಯಯನ ಪೀಠಗಳಾಗುತ್ತಿವೆ. ಸಂಶೋಧನಾತ್ಮಕ ಪ್ರಬಂಧಗಳು ಮಂಡಿಸಲಾಗುತ್ತದೆ, ಇವೆಲ್ಲವುಗಳನ್ನು ಹೊರತುಪಡಿಸಿ ನಾಗರಿಕ ಸಮಾಜದ ನಿರ್ಮಾಣದ ಹಾದಿಯಲ್ಲಿ ಸಾಗುವಂತ ಪ್ರಯತ್ನಗಳು ಆಗಬೇಕು’ ಎಂದು ಹೇಳಿದರು.</p>.<p>ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ್ ಬೇವಿನಬೆಂಚಿ ಅಧ್ಯಕ್ಷತೆ ವಹಿಸಿದ್ದರು.</p>.<p>ದಾನಮ್ಮ ಎಸ್., ನಾಗಪ್ಪ ಹೊರಪ್ಯಾಟಿ, ಈರಣ್ಣ ಬೆಂಗಾಲಿ, ದಂಡಪ್ಪ ಬಿರಾದಾರ, ರಾವುತರಾವ್ ಬರೂರ, ಪ್ರತಿಭಾ ಗೋನಾಳ, ವಸಂತ್ ಕುಮಾರ್, ರಾಮಣ್ಣ ಬೋಯರ್, ದೇವೇಂದ್ರಮ್ಮ, ಡಾ. ಬಿ. ವಿಜಯರಾಜೇಂದ್ರ, ಮಹೇಶ ಚೀಕಲಪರವಿ, ಕುಮಾರ ಸಂಜಿತ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>