<p>ಕವಿತಾಳ: ಇಲ್ಲಿಗೆ ಸಮೀಪದ ಆನಂದಗಲ್ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಉಟಕನೂರು ಅಡವಿ ಸಿದ್ದೇಶ್ವರ ಮಠದ ಮರಿಬಸವರಾಜ ದೇಶೀಕೇಂದ್ರ ಸ್ವಾಮೀಜಿ, ಮಸ್ಕಿ ಗಚ್ಚಿನ ಹಿರೇಮಠದ ವರರುದ್ರಮುನಿ ಸ್ವಾಮೀಜಿ ಅವರು ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಪೂಜಾ ಕಾರ್ಯ ನಡೆಸಿಕೊಟ್ಟರು.</p>.<p>ನವಗ್ರಹ ಪೂಜೆ, ಮಹಾ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ತಾತಪ್ಪನ ಗದ್ದುಗೆಯಿಂದ ದೇವಸ್ಥಾನದ ವರೆಗೆ ಡೊಳ್ಳು, ಬಾಜಾ–ಭಜಂತ್ರಿ ಮತ್ತಿತರ ಮಂಗಳವಾದ್ಯ, ಪೂರ್ಣಕುಂಭ– ಕಳಸ, ಬಸವಣ್ಣನವರ ಚಿತ್ರದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮಹಿಳೆಯರು ಮಕ್ಕಳು, ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p>ಗ್ರಾಮದ ನಾಗನಗೌಡ, ಬಸನಗೌಡ ಪಾಟೀಲ, ಶರಣಪ್ಪ ಕಲಂಗೇರ, ಪಂಪಾಪತಿ ತುಮಕೂರು, ವೀರನಗೌಡ ಪಾಟೀಲ, ಅಂಬಣ್ಣ ದಿನ್ನಿ, ಶಿವಪುತ್ರಪ್ಪ ಹೊನ್ನಳ್ಳಿ, ಶರಣಪ್ಪ, ವೀರೇಶ ಕಲಂಗೇರ, ಪ್ರಭುಗೌಡ ಪಾಟೀಲ, ವೆಂಕಟೇಶ, ಅಖಂಡೇಶ್ವರ ಸೂಗೂರು, ಹುಚ್ಚರಡ್ಡಿ ತುಮಕೂರು ಮತ್ತಿತರರು ಉಪಸ್ಥಿತರಿದ್ದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ: ಇಲ್ಲಿಗೆ ಸಮೀಪದ ಆನಂದಗಲ್ ಗ್ರಾಮದಲ್ಲಿ ಬಸವೇಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.</p>.<p>ಉಟಕನೂರು ಅಡವಿ ಸಿದ್ದೇಶ್ವರ ಮಠದ ಮರಿಬಸವರಾಜ ದೇಶೀಕೇಂದ್ರ ಸ್ವಾಮೀಜಿ, ಮಸ್ಕಿ ಗಚ್ಚಿನ ಹಿರೇಮಠದ ವರರುದ್ರಮುನಿ ಸ್ವಾಮೀಜಿ ಅವರು ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಪೂಜಾ ಕಾರ್ಯ ನಡೆಸಿಕೊಟ್ಟರು.</p>.<p>ನವಗ್ರಹ ಪೂಜೆ, ಮಹಾ ರುದ್ರಾಭಿಷೇಕ, ಮಹಾ ಮಂಗಳಾರತಿ ಸೇರಿದಂತೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು. ತಾತಪ್ಪನ ಗದ್ದುಗೆಯಿಂದ ದೇವಸ್ಥಾನದ ವರೆಗೆ ಡೊಳ್ಳು, ಬಾಜಾ–ಭಜಂತ್ರಿ ಮತ್ತಿತರ ಮಂಗಳವಾದ್ಯ, ಪೂರ್ಣಕುಂಭ– ಕಳಸ, ಬಸವಣ್ಣನವರ ಚಿತ್ರದ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಮಹಿಳೆಯರು ಮಕ್ಕಳು, ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.</p>.<p>ಗ್ರಾಮದ ನಾಗನಗೌಡ, ಬಸನಗೌಡ ಪಾಟೀಲ, ಶರಣಪ್ಪ ಕಲಂಗೇರ, ಪಂಪಾಪತಿ ತುಮಕೂರು, ವೀರನಗೌಡ ಪಾಟೀಲ, ಅಂಬಣ್ಣ ದಿನ್ನಿ, ಶಿವಪುತ್ರಪ್ಪ ಹೊನ್ನಳ್ಳಿ, ಶರಣಪ್ಪ, ವೀರೇಶ ಕಲಂಗೇರ, ಪ್ರಭುಗೌಡ ಪಾಟೀಲ, ವೆಂಕಟೇಶ, ಅಖಂಡೇಶ್ವರ ಸೂಗೂರು, ಹುಚ್ಚರಡ್ಡಿ ತುಮಕೂರು ಮತ್ತಿತರರು ಉಪಸ್ಥಿತರಿದ್ದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>