<p>ಪ್ರಜಾವಾಣಿ ವಾರ್ತೆ</p>.<p>ರಾಯಚೂರು: ‘ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರಿಗೆ ಪುರುಷರಂತೆ ಮುಕ್ತವಾಗಿ ಬದುಕುವ ಹಕ್ಕು ಇದೆ. ಮಹಿಳೆಯರಿಗಾಗಿ ಇರುವ ಉದ್ಯಮಶೀಲತಾ ತರಬೇತಿಯ ಸದುಪಯೋಗ ಪಡೆದು, ಯಶಸ್ವಿ ಉದ್ಯಮಿಯಾಗಿ ಇನ್ನುಳಿದವರಿಗೂ ಉದ್ಯೋಗ ನೀಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಹೇಳಿದರು.</p>.<p>ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘದ ಸದಸ್ಯರಿಗೆ ಸಂಕಲ್ಪ ಯೋಜನೆಯಡಿ ಆಯೋಜಿಸಿದ್ದ ಐದು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.</p>.<p>‘ಕೃಷಿ ಮತ್ತು ಕೃಷಿಯೇತರ ಅವಲಂಬಿತ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಸ್ವಂತ ಉದ್ಯೋಗ ಪ್ರಾರಂಭಿಸಬೇಕು. ಸ್ವಂತ ಬ್ರಾಂಡ್ ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ ಮಾತನಾಡಿ, ‘ಸಮುದಾಯ ಮತ್ತು ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸ್ವ-ಉದ್ಯೋಗವನ್ನು ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಕುಟುಂಬವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯ ಮೇಲಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮುಕ್ತವಾಗಿ ಸಾಧನೆ ಮಾಡುವ ಅವಕಾಶ ಇದೆ. ಮಹಿಳೆಯರು ಸಂಕೋಚವಿಲ್ಲದೆ ದುಡಿಯುವಂತಾಗಬೇಕು’ ಎಂದು ತಿಳಿಸಿದರು.</p>.<p>ಕೃಷಿ ವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಮುಖ್ಯಸ್ಥ ಡಾ.ಬಸವಣ್ಣಪ್ಪ, ಸಂಪನ್ಮೂಲ ವ್ಯಕ್ತಿ ಗೌರಮ್ಮ, ಡೇ-ನಲ್ಮ್ ವ್ಯವಸ್ಥಾಪಕ ರಸೂಲ್ ಸಾಬ್, ಸಿಡಾಕ್ ನಾಗರಾಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ರಾಯಚೂರು: ‘ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರಿಗೆ ಪುರುಷರಂತೆ ಮುಕ್ತವಾಗಿ ಬದುಕುವ ಹಕ್ಕು ಇದೆ. ಮಹಿಳೆಯರಿಗಾಗಿ ಇರುವ ಉದ್ಯಮಶೀಲತಾ ತರಬೇತಿಯ ಸದುಪಯೋಗ ಪಡೆದು, ಯಶಸ್ವಿ ಉದ್ಯಮಿಯಾಗಿ ಇನ್ನುಳಿದವರಿಗೂ ಉದ್ಯೋಗ ನೀಡುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಹೇಳಿದರು.</p>.<p>ಇಲ್ಲಿಯ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವ-ಸಹಾಯ ಸಂಘದ ಸದಸ್ಯರಿಗೆ ಸಂಕಲ್ಪ ಯೋಜನೆಯಡಿ ಆಯೋಜಿಸಿದ್ದ ಐದು ದಿನಗಳ ಉದ್ಯಮಶೀಲತಾ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.</p>.<p>‘ಕೃಷಿ ಮತ್ತು ಕೃಷಿಯೇತರ ಅವಲಂಬಿತ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಮಹಿಳೆಯರು ಸ್ವಂತ ಉದ್ಯೋಗ ಪ್ರಾರಂಭಿಸಬೇಕು. ಸ್ವಂತ ಬ್ರಾಂಡ್ ಹೊಂದಬೇಕು’ ಎಂದು ಸಲಹೆ ನೀಡಿದರು.</p>.<p>ಸಿಡಾಕ್ ಜಂಟಿ ನಿರ್ದೇಶಕ ಜಿ.ಯು.ಹುಡೇದ ಮಾತನಾಡಿ, ‘ಸಮುದಾಯ ಮತ್ತು ಕುಟುಂಬದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರು ಸ್ವ-ಉದ್ಯೋಗವನ್ನು ಕೈಗೊಳ್ಳಬೇಕು’ ಎಂದು ಹೇಳಿದರು.</p>.<p>‘ಕುಟುಂಬವನ್ನು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯ ಮೇಲಿದೆ. ಎಲ್ಲ ಕ್ಷೇತ್ರಗಳಲ್ಲಿಯೂ ಮುಕ್ತವಾಗಿ ಸಾಧನೆ ಮಾಡುವ ಅವಕಾಶ ಇದೆ. ಮಹಿಳೆಯರು ಸಂಕೋಚವಿಲ್ಲದೆ ದುಡಿಯುವಂತಾಗಬೇಕು’ ಎಂದು ತಿಳಿಸಿದರು.</p>.<p>ಕೃಷಿ ವಿದ್ಯಾಲಯದ ಸಾವಯವ ಕೃಷಿ ಸಂಶೋಧನಾ ಮುಖ್ಯಸ್ಥ ಡಾ.ಬಸವಣ್ಣಪ್ಪ, ಸಂಪನ್ಮೂಲ ವ್ಯಕ್ತಿ ಗೌರಮ್ಮ, ಡೇ-ನಲ್ಮ್ ವ್ಯವಸ್ಥಾಪಕ ರಸೂಲ್ ಸಾಬ್, ಸಿಡಾಕ್ ನಾಗರಾಜ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>