<p><strong>ಲಿಂಗಸುಗೂರು</strong>: ‘ಸೈಬರ್ ಮೂಲಕ ಅನೇಕರು ವಂಚನೆಗೊಳಾಗಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಪ್ರತಿಯೊಬ್ಬರು ಎಚ್ಚರಿಕೆಯಿಂದಿರಬೇಕು’ ಎಂದು ರಾಯಚೂರು ಸೈಬರ್ ಕ್ರೈಂ ವಿಭಾಗದ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತಾನಾಡಿದರು.</p>.<p>‘ಸಾಮಾಜಿಕ ಜಾಲತಾಣ ಬಳಕೆ ಮಾಡುವಾಗ ನಮಗೆ ಅರಿವಿರದೇ ಮೋಸಕ್ಕೆ ಒಳಗಾಗುತ್ತಿದ್ದೇವೆ. ಇದನ್ನು ಎಚ್ಚರಿಕೆಯಿಂದ ಬಳಕೆ ಮಾಡಿದರೆ ವಂಚನೆಯಿಂದ ತಪ್ಪಿಸಿಕೊಳ್ಳಬಹುದು. ಆದರೆ ಸಾಮಾಜಿಕ ಜಾಲತಾಣದಲ್ಲಿ ಅವಘಡಗಳು ಹೆಚ್ಚಾಗಿದ್ದು, ಅನೇಕರು ಹಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಮಾಡದ ಅಪರಾಧಕ್ಕೆ ಬೆದರಿಕೆ ಕರೆಗಳು ಬರುತ್ತವೆ ಆ ಮೂಲಕ ಡಿಜಿಟಲ್ ಅರೆಸ್ಟ್ ನಂತಹ ಜಾಲದಲ್ಲಿ ಸಿಲುಕಿ ಕೋಟಿಗಟ್ಟಲೆ ಹಣ ಕಳೆದುಕೊಂಡವರೂ ಇದ್ದಾರೆ’ ಎಂದರು.</p>.<p>‘ಇಂತಹ ಪ್ರಕರಣಗಳನ್ನು ಸೈಬರ್ ಅಪರಾಧ ವಿಭಾಗ ಭೇದಿಸಿದೆ. ಜನರಿಗೆ ನ್ಯಾಯ ಒದಗಿಸಲಾಗಿದೆ. ಆದರೆ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೋಹದ ಜಾಲದೊಳಗೆ ಸಿಲುಕಿ ವಂಚನೆಗೆ ಒಳಗಾಗದೇ ಎಚ್ಚರಿಕೆ ವಹಿಸಬೇಕು’ ಎಂದರು.</p>.<p>ಈ ವೇಳೆ ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ತಹಶೀಲ್ದಾರ್ ಸತ್ಯಮ್ಮ, ಪ್ರಾಂಶುಪಾಲ ವೆಂಕಟನಾರಾಯಣ, ಪ್ರಾಧ್ಯಾಪಕ ಹನುಮಂತಪ್ಪ, ಸಂಗನಗೌಡ, ನವೀನಕುಮಾರ, ಸರಿತಾ ಇಂಚೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು</strong>: ‘ಸೈಬರ್ ಮೂಲಕ ಅನೇಕರು ವಂಚನೆಗೊಳಾಗಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಪ್ರತಿಯೊಬ್ಬರು ಎಚ್ಚರಿಕೆಯಿಂದಿರಬೇಕು’ ಎಂದು ರಾಯಚೂರು ಸೈಬರ್ ಕ್ರೈಂ ವಿಭಾಗದ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸೈಬರ್ ಅಪರಾಧ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತಾನಾಡಿದರು.</p>.<p>‘ಸಾಮಾಜಿಕ ಜಾಲತಾಣ ಬಳಕೆ ಮಾಡುವಾಗ ನಮಗೆ ಅರಿವಿರದೇ ಮೋಸಕ್ಕೆ ಒಳಗಾಗುತ್ತಿದ್ದೇವೆ. ಇದನ್ನು ಎಚ್ಚರಿಕೆಯಿಂದ ಬಳಕೆ ಮಾಡಿದರೆ ವಂಚನೆಯಿಂದ ತಪ್ಪಿಸಿಕೊಳ್ಳಬಹುದು. ಆದರೆ ಸಾಮಾಜಿಕ ಜಾಲತಾಣದಲ್ಲಿ ಅವಘಡಗಳು ಹೆಚ್ಚಾಗಿದ್ದು, ಅನೇಕರು ಹಣ ಕಳೆದುಕೊಳ್ಳುತ್ತಿದ್ದಾರೆ. ಅಲ್ಲದೇ ಮಾಡದ ಅಪರಾಧಕ್ಕೆ ಬೆದರಿಕೆ ಕರೆಗಳು ಬರುತ್ತವೆ ಆ ಮೂಲಕ ಡಿಜಿಟಲ್ ಅರೆಸ್ಟ್ ನಂತಹ ಜಾಲದಲ್ಲಿ ಸಿಲುಕಿ ಕೋಟಿಗಟ್ಟಲೆ ಹಣ ಕಳೆದುಕೊಂಡವರೂ ಇದ್ದಾರೆ’ ಎಂದರು.</p>.<p>‘ಇಂತಹ ಪ್ರಕರಣಗಳನ್ನು ಸೈಬರ್ ಅಪರಾಧ ವಿಭಾಗ ಭೇದಿಸಿದೆ. ಜನರಿಗೆ ನ್ಯಾಯ ಒದಗಿಸಲಾಗಿದೆ. ಆದರೆ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದ ಮೋಹದ ಜಾಲದೊಳಗೆ ಸಿಲುಕಿ ವಂಚನೆಗೆ ಒಳಗಾಗದೇ ಎಚ್ಚರಿಕೆ ವಹಿಸಬೇಕು’ ಎಂದರು.</p>.<p>ಈ ವೇಳೆ ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್, ತಹಶೀಲ್ದಾರ್ ಸತ್ಯಮ್ಮ, ಪ್ರಾಂಶುಪಾಲ ವೆಂಕಟನಾರಾಯಣ, ಪ್ರಾಧ್ಯಾಪಕ ಹನುಮಂತಪ್ಪ, ಸಂಗನಗೌಡ, ನವೀನಕುಮಾರ, ಸರಿತಾ ಇಂಚೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>