<p><strong>ಕವಿತಾಳ (ರಾಯಚೂರು ಜಿಲ್ಲೆ)</strong>: ಪಟ್ಟಣದ ಪೊಲೀಸ್ ಠಾಣೆಯು ಕೇಂದ್ರ ಗೃಹ ಸಚಿವಾಲಯದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನವಾಗಿದೆ. ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ಕವಿತಾಳ ಪೊಲೀಸ್ ಠಾಣೆಯು ತೃತೀಯ ಸ್ಥಾನ ಪಡೆದಿದೆ.</p>.<p>ಮಹಿಳಾ ದೂರುದಾರರಿಂದ ದೂರು ಸ್ವೀಕೃತಿ, ಪ್ರಕರಣ ದಾಖಲು, ಸಾರ್ವಜನಿಕರಿಗೆ ಠಾಣಾಧಿಕಾರಿ ಮತ್ತು ಸಿಬ್ಬಂದಿ ಸ್ಪಂದನೆ, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ತಡೆ, ಉತ್ತಮ ಪರಿಸರ, ಸ್ವಚ್ಛತೆ, ಮೂಲಸೌಲಭ್ಯ ಸೇರಿದಂತೆ ಜನಸ್ನೇಹಿ ವ್ಯವಸ್ಥೆ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ.</p>.<p>ಪ್ರಾಥಮಿಕ ಹಂತದಲ್ಲಿ ಪ್ರಶಸ್ತಿಗೆ ಪರಿಗಣಿಸಲಾದ 78 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಕವಿತಾಳ, ಬಳಗಾನೂರು ಮತ್ತು ಬಳ್ಳಾರಿ ಜಿಲ್ಲೆಯ ಸಿರಗೇರಿ ಠಾಣೆಗಳನ್ನು ಗುರುತಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ ಕವಿತಾಳ ಠಾಣೆ ತೃತೀಯ ಸ್ಥಾನ ಪಡೆದಿದೆ.</p>.<p>ನ. 28ರಂದು ಛತ್ತೀಸಗಡದ ರಾಯಪುರದಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಯಾ ಠಾಣಾಧಿಕಾರಿಗಳಿಗೆ ಪ್ರಶಸ್ತಿ ವಿತರಿಸಲಿದ್ದು, ಕವಿತಾಳ ಠಾಣೆ ಎಸ್ಐ ಗುರುಚಂದ್ರ ಯಾದವ ಪ್ರಶಸ್ತಿ ಸ್ವೀಕರಿಸಲಿದ್ದಾರೆ.</p>.<div><blockquote>ಕೇಂದ್ರ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಬಲ ತುಂಬಿದಂತಾಗಿದೆ. ಜನಸ್ನೇಹಿ ವ್ಯವಸ್ಥೆಯಲ್ಲಿ ಠಾಣಾಧಿಕಾರಿ ಸಿಬ್ಬಂದಿ ಪರಿಶ್ರಮವಿದೆ.</blockquote><span class="attribution">– ಎಂ.ಪುಟ್ಟಮಾದಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಯಚೂರು</span></div>.<div><blockquote>ಕೇಂದ್ರ ಪ್ರಶಸ್ತಿ ಸ್ವೀಕರಿಸುವ ಸುವರ್ಣಾವಕಾಶ ಒದಗಿ ಬಂದಿರುವುದು ಸಂತಸ ತಂದಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದೆಯೂ ಉತ್ತಮ ಸೇವೆ ಒದಗಿಸಲಾಗುವುದು.</blockquote><span class="attribution">– ಗುರುಚಂದ್ರ ಯಾದವ, ಎಸ್ಐ ಕವಿತಾಳ ಠಾಣೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ (ರಾಯಚೂರು ಜಿಲ್ಲೆ)</strong>: ಪಟ್ಟಣದ ಪೊಲೀಸ್ ಠಾಣೆಯು ಕೇಂದ್ರ ಗೃಹ ಸಚಿವಾಲಯದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಭಾಜನವಾಗಿದೆ. ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ಕವಿತಾಳ ಪೊಲೀಸ್ ಠಾಣೆಯು ತೃತೀಯ ಸ್ಥಾನ ಪಡೆದಿದೆ.</p>.<p>ಮಹಿಳಾ ದೂರುದಾರರಿಂದ ದೂರು ಸ್ವೀಕೃತಿ, ಪ್ರಕರಣ ದಾಖಲು, ಸಾರ್ವಜನಿಕರಿಗೆ ಠಾಣಾಧಿಕಾರಿ ಮತ್ತು ಸಿಬ್ಬಂದಿ ಸ್ಪಂದನೆ, ಬಾಲ್ಯವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ತಡೆ, ಉತ್ತಮ ಪರಿಸರ, ಸ್ವಚ್ಛತೆ, ಮೂಲಸೌಲಭ್ಯ ಸೇರಿದಂತೆ ಜನಸ್ನೇಹಿ ವ್ಯವಸ್ಥೆ ಹಿನ್ನೆಲೆಯಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದೆ.</p>.<p>ಪ್ರಾಥಮಿಕ ಹಂತದಲ್ಲಿ ಪ್ರಶಸ್ತಿಗೆ ಪರಿಗಣಿಸಲಾದ 78 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯ ಕವಿತಾಳ, ಬಳಗಾನೂರು ಮತ್ತು ಬಳ್ಳಾರಿ ಜಿಲ್ಲೆಯ ಸಿರಗೇರಿ ಠಾಣೆಗಳನ್ನು ಗುರುತಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ ಕವಿತಾಳ ಠಾಣೆ ತೃತೀಯ ಸ್ಥಾನ ಪಡೆದಿದೆ.</p>.<p>ನ. 28ರಂದು ಛತ್ತೀಸಗಡದ ರಾಯಪುರದಲ್ಲಿ ನಡೆಯುವ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಯಾ ಠಾಣಾಧಿಕಾರಿಗಳಿಗೆ ಪ್ರಶಸ್ತಿ ವಿತರಿಸಲಿದ್ದು, ಕವಿತಾಳ ಠಾಣೆ ಎಸ್ಐ ಗುರುಚಂದ್ರ ಯಾದವ ಪ್ರಶಸ್ತಿ ಸ್ವೀಕರಿಸಲಿದ್ದಾರೆ.</p>.<div><blockquote>ಕೇಂದ್ರ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ. ಜಿಲ್ಲೆಯ ಪೊಲೀಸ್ ವ್ಯವಸ್ಥೆಗೆ ಬಲ ತುಂಬಿದಂತಾಗಿದೆ. ಜನಸ್ನೇಹಿ ವ್ಯವಸ್ಥೆಯಲ್ಲಿ ಠಾಣಾಧಿಕಾರಿ ಸಿಬ್ಬಂದಿ ಪರಿಶ್ರಮವಿದೆ.</blockquote><span class="attribution">– ಎಂ.ಪುಟ್ಟಮಾದಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಯಚೂರು</span></div>.<div><blockquote>ಕೇಂದ್ರ ಪ್ರಶಸ್ತಿ ಸ್ವೀಕರಿಸುವ ಸುವರ್ಣಾವಕಾಶ ಒದಗಿ ಬಂದಿರುವುದು ಸಂತಸ ತಂದಿದೆ. ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂದೆಯೂ ಉತ್ತಮ ಸೇವೆ ಒದಗಿಸಲಾಗುವುದು.</blockquote><span class="attribution">– ಗುರುಚಂದ್ರ ಯಾದವ, ಎಸ್ಐ ಕವಿತಾಳ ಠಾಣೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>