ಗುರುವಾರ, 21 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿನಗರ | ಶಿಕ್ಷಕಿ ಸೈಯದ್ ಸಾಜಿದಾ ಫಾತಿಮಾಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Published 3 ಸೆಪ್ಟೆಂಬರ್ 2023, 14:23 IST
Last Updated 3 ಸೆಪ್ಟೆಂಬರ್ 2023, 14:23 IST
ಅಕ್ಷರ ಗಾತ್ರ

ಶಕ್ತಿನಗರ: ರಾಯಚೂರು ತಾಲ್ಲೂಕಿನ ಯರಮರಸ್ ಕ್ಯಾಂಪ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಸೈಯದ್ ಸಾಜಿದಾ ಫಾತಿಮಾ ಅವರು ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಇವರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಚಿನ್ನದಗಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1998 ರ ಆಗಸ್ಟ್ 20 ರಂದು ಶಿಕ್ಷಕ ವೃತ್ತಿ ಆರಂಭಿಸಿದರು.

ಶಿಕ್ಷಣ ಇಲಾಖೆಯ ವಿಶೇಷ ಯೋಜನೆಯಾದ ನಲಿ ಕಲಿ ತರಬೇತಿ ಪಡೆದು ಜಿಲ್ಲೆಯ ಶಿಕ್ಷಕರಿಗೆ ತರಬೇತಿ ನೀಡಿದ್ದಾರೆ. ‘ನನ್ನ ಶಾಲೆ’, ‘ನಲಿ ಕಲಿ’ ಶಿಕ್ಷಣ ಕೇಂದ್ರ ಆರಂಭ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದರ ಜತೆಗೆ ಶಾಲೆಯ ಭೌತಿಕ ಪ್ರಗತಿಗೂ ಸೈಯದ್ ಸಾಜಿದಾ ಫಾತಿಮಾ ಶ್ರಮಿಸುತ್ತಿದ್ದಾರೆ.

ನನ್ನ ಸೇವೆಯನ್ನು ಗುರುತಿಸಿ ಸರ್ಕಾರ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹ ನೀಡಿದೆ. ಇದರಿಂದ ಮತ್ತಷ್ಟು ಕೆಲಸ ಮಾಡಲು ಉತ್ಸಾಹ ಸಿಕ್ಕಿದೆ. ಇನ್ನೂ ಹಲವು ಕನಸುಗಳಿದ್ದು ಅವುಗಳನ್ನು ಈಡೇರಿಸಲು ಶ್ರಮಿಸುತ್ತೇನೆ.
ಸೈಯದ್ ಸಾಜಿದಾ ಫಾತಿಮಾ, ಪ್ರಶಸ್ತಿ ಪುರಸ್ಕೃತರು

ಕೋವಿಡ್ ಸಮಯದಲ್ಲಿ ಯರಮರಸ್ ಕ್ಯಾಂಪ್‌ನ ಅಫತಾಬ್ ಶಿಕ್ಷಣ ಸಂಸ್ಥೆಯ ಅಫತಾಬ್ ಫಂಕ್ಷನ್ ಹಾಲ್‌ನಲ್ಲಿ ವಠಾರ ಶಾಲೆ ಮಾಡಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ. ಪ್ರತಿವರ್ಷ ಗೈರಾದ ವಿದ್ಯಾರ್ಥಿಗಳ ಮನೆ ಮನೆಗೆ ಭೇಟಿ ನೀಡಿ ಅವರನ್ನು ಪುನಃ ಶಾಲೆಗೆ ಕರೆ ತರುವ ಕೆಲಸ ಮಾಡುತ್ತಾರೆ. ದಾಖಲಾತಿ ಅಭಿಯಾನದ ಮೂಲಕ ಶಿಕ್ಷಣದ ಮಹತ್ವದ ಕುರಿತು ಜಾಗೃತಿ ಮೂಡಿಸಿದ್ದಾರೆ. ಶಿಲ್ಪಾ ಕಂಪನಿಯ ಸಹಕಾರದಿಂದ ಸಿಎಸ್‌ಆರ್ ಅನುದಾನದಲ್ಲಿ ಶಾಲೆಗೆ ಬೆಂಚ್‌ಗಳ ವ್ಯವಸ್ಥೆ ಮಾಡಲಾಗಿದೆ. ಅರಣ್ಯ ಇಲಾಖೆಯ ಸಹಕಾರದಿಂದ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟಿದ್ದಾರೆ. ಮಕ್ಕಳಿಗೆ ಸುಲಭವಾಗಿ ಇಂಗ್ಲಿಷ್‌ ಭಾಷೆ ಕಲಿಕೆ, ಭಾಷಣ, ರಾಷ್ಟ್ರೀಯ ಭಾವೈಕ್ಯದ ಕುರಿತು ಮಕ್ಕಳಿಗೆ ಬೋಧಿಸುತ್ತಾರೆ. ನಾಟಕ, ಭಾಷಣಗಳ ಮೂಲಕ ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನರಿಗೆ ಮತ್ತು ಮಕ್ಕಳಿಗೆ ಅರಿವು ಮೂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT