<p><strong>ದೇವದುರ್ಗ:</strong> ‘ಉಪ್ಪಾರ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಸರ್ಕಾರ ಈ ಸಮುದಾಯಕ್ಕೆ ಹೆಚ್ಚು ರಾಜಕೀಯ ಪ್ರಾಧಾನ್ಯ ನೀಡಬೇಕು’ ಎಂದು ಭಗೀರಥ ಸಮಾಜದ ತಾಲ್ಲೂಕು ಅಧ್ಯಕ್ಷ ಭೀಮಣ್ಣ ಒತ್ತಾಯಿಸಿದರು.</p>.<p>ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜೊತೆಗೆ ರಾಜಕೀಯ ಪ್ರಜ್ಞೆ ಮೂಡಿಸಬೇಕು. ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಯಾವುದೇ ಸರ್ಕಾರ ಬಂದರೂ ಮೊದಲಿನಿಂದಲೂ ಉಪ್ಪಾರ ಸಮುದಾಯವನ್ನು ಕಡೆಗಣಿಸುತ್ತ ಬಂದಿವೆ. ಸಮಾಜದ ಜನರು ಸಂಘಟಿತರಾಗಿ ಒಗ್ಗೂಡಿ ಹೋರಾಟ ಮಾಡಬೇಕು’ ಎಂದರು.</p>.<p>ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಾಗಪ್ಪ ಉಪ್ಪಾರ, ಮುಕ್ಕಣ್ಣ ವಕೀಲ, ಮೌನೇಶ ಬೂದಿನಾಳ, ಸುರೇಶ, ವೇಂಕೊಬ, ಹನುಮಂತ, ಯಂಕಪ್ಪ, ಮಧುರಂಗಪ್ಪ, ಶಿವಪ್ಪ, ರಂಗಪ್ಪ ಇರಬಗೇರಾ, ತಿರುಪತಿ ಮಾನಸಗಲ್, ಶಿವಪುತ್ರ ಮತ್ತು ಭೀಮರಾಯ ನಾಯಕ ಮೇಟಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವದುರ್ಗ:</strong> ‘ಉಪ್ಪಾರ ಸಮುದಾಯ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ಸರ್ಕಾರ ಈ ಸಮುದಾಯಕ್ಕೆ ಹೆಚ್ಚು ರಾಜಕೀಯ ಪ್ರಾಧಾನ್ಯ ನೀಡಬೇಕು’ ಎಂದು ಭಗೀರಥ ಸಮಾಜದ ತಾಲ್ಲೂಕು ಅಧ್ಯಕ್ಷ ಭೀಮಣ್ಣ ಒತ್ತಾಯಿಸಿದರು.</p>.<p>ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಭಗೀರಥ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವುದರ ಜೊತೆಗೆ ರಾಜಕೀಯ ಪ್ರಜ್ಞೆ ಮೂಡಿಸಬೇಕು. ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಯಾವುದೇ ಸರ್ಕಾರ ಬಂದರೂ ಮೊದಲಿನಿಂದಲೂ ಉಪ್ಪಾರ ಸಮುದಾಯವನ್ನು ಕಡೆಗಣಿಸುತ್ತ ಬಂದಿವೆ. ಸಮಾಜದ ಜನರು ಸಂಘಟಿತರಾಗಿ ಒಗ್ಗೂಡಿ ಹೋರಾಟ ಮಾಡಬೇಕು’ ಎಂದರು.</p>.<p>ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ನಾಗಪ್ಪ ಉಪ್ಪಾರ, ಮುಕ್ಕಣ್ಣ ವಕೀಲ, ಮೌನೇಶ ಬೂದಿನಾಳ, ಸುರೇಶ, ವೇಂಕೊಬ, ಹನುಮಂತ, ಯಂಕಪ್ಪ, ಮಧುರಂಗಪ್ಪ, ಶಿವಪ್ಪ, ರಂಗಪ್ಪ ಇರಬಗೇರಾ, ತಿರುಪತಿ ಮಾನಸಗಲ್, ಶಿವಪುತ್ರ ಮತ್ತು ಭೀಮರಾಯ ನಾಯಕ ಮೇಟಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>