ಈ ಕುರಿತು ಹೇಳಿಕೆ ನೀಡಿರುವ ಅವರು, ‘ದೇಶದೆಲ್ಲೆಡೆ ಬಿಜೆಪಿಯ ಹಿಂದುತ್ವದ ವಿಶೇಷ ಚೇತನವನ್ನು ಮೂಡಿಸಿರುವ ಎಲ್.ಕೆ.ಅಡ್ವಾಣಿ ಅವರು ನಿಜವಾಗಿಯೂ ಅಭಿನಂದನಾರ್ಹರು. ಅವರ ಪರಿಶ್ರಮ, ಹೋರಾಟ ಮತ್ತು ಜನ ಜಾಗೃತಿ ಜಾತ್ರೆಯ ಪರಿಣಾಮವಾಗಿ ಇಂದು ಅಯೋಧ್ಯೆಯ ಶ್ರೀರಾಮಜನ್ಮಭೂಮಿ ಸ್ಥಳದಲ್ಲಿ ಮಂದಿರ ನಿರ್ಮಾಣವಾಗಿ ಬಾಲರಾಮ ದೇವರ ಮೂರ್ತಿಯ ಪ್ರತಿಷ್ಠಾಪನೆ ಆಗಿದೆ. ಅಂತಹ ಉತ್ತಮ ಸಾಧಕರಿಗೆ ದೇಶದ ಅತ್ಯುನ್ನತ ಗೌರವ ಲಭಿಸಿರುವುದು ಎಲ್ಲರಿಗೂ ಹೆಮ್ಮಯ ವಿಷಯವಾಗಿದೆ’ ಎಂದು ಹೇಳಿದ್ದಾರೆ.