ಕವಿತಾಳ: ’ಹಳ್ಳಿಗಳಿಗೆ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಕ್ಷೇತ್ರದ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೂ ಅನುದಾನ ನೀಡಲಾಗಿದೆʼ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಪರಸಾಪುರ ಗ್ರಾಮದಲ್ಲಿ ಅಂದಾಜು ₹ 5 ಲಕ್ಷ ವೆಚ್ಚದಲ್ಲಿ ಮಾರುತೇಶ್ವರ ದೇವಸ್ಥಾನದ ಅಭಿವೃದ್ದಿ, ಯಕ್ಲಾಸ್ಪುರದಲ್ಲಿ ₹ 5 ಲಕ್ಷದಲ್ಲಿ ಗಾಳಿಮಾರೆಮ್ಮ ದೇವಿ ದೇವಸ್ಥಾನ ನಿರ್ಮಾಣ, ವಟಗಲ್ ಗ್ರಾಮದಲ್ಲಿ ₹ 5 ಲಕ್ಷ ದಲ್ಲಿ ಚಂದಪ್ಪ ತಾತನ ದೇವಸ್ಥಾನದ ಅಭಿವೃದ್ದಿ ಹಾಗೂ ₹10 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.
’ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಅಧಿಕಾರಿಗಳು ಕಾಳಜಿ ವಹಿಸಬೇಕು ಮತ್ತು ಗ್ರಾಮೀಣ ಭಾಗದ ಅಭಿವೃದ್ದಿ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕುʼ ಎಂದರು.
ಕವಿತಾಳ ಸಮೀಪದ ಪರಸಾಪುರ ಗ್ರಾಮದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ದೇವಸ್ಥಾನ ಅಭಿವೃದ್ದಿಗೆ ಸೋಮವಾರ ಭೂಮಿಪೂಜೆ ಮಾಡಿದರು.