<p><strong>ಕವಿತಾಳ:</strong> ‘ಕನ್ನಡ ಭಾಷೆ, ನೆಲ, ಜಲದ ವಿಷಯದಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ಕಲ್ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಕನ್ನಡ ಅಭಿಮಾನಿ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪ್ರತಿ ವರ್ಷ ಅದ್ದೂರಿಯಾಗಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕನ್ನಡದ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿರುವ ಕನ್ನಡ ಅಭಿಮಾನಿ ಬಳಗದ ಕಾರ್ಯ ಶ್ಲಾಘನೀಯ’ ಎಂದರು.</p>.<p>ಸರ್ಕಾರಿ ಪ್ರೌಢಶಾಲೆಯಿಂದ ಪ್ರಮುಖ ರಸ್ತೆಗಳಲ್ಲಿ ಭುವನೇಶ್ವರಿ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು.</p>.<p>ಮುಖಂಡರಾದ ಕಿರಲಿಂಗಪ್ಪ, ಯಮನಪ್ಪ ದಿನ್ನಿ, ಬಲವಂತರಾಯ ವಟಗಲ್, ಶಿವಣ್ಣ ವಕೀಲ, ಮಾಳಪ್ಪ ತೋಳ, ಚಾಂದಪಾಶಾ, ಸುರೇಶ ರಡ್ಡಿ, ಮಲ್ಲಿಕಾರ್ಜುನ ಗೌಡ, ಅಮರೇಶ ಕಟ್ಟಿಮನಿ, ರುಕ್ಮುದ್ದೀನ್, ಮೌನೇಶ ನಾಯಕ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ‘ಕನ್ನಡ ಭಾಷೆ, ನೆಲ, ಜಲದ ವಿಷಯದಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು’ ಎಂದು ಕಲ್ಮಠದ ಅಭಿನವ ಸಿದ್ದಲಿಂಗ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದಲ್ಲಿ ಕನ್ನಡ ಅಭಿಮಾನಿ ಬಳಗದ ವತಿಯಿಂದ ಶನಿವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಪ್ರತಿ ವರ್ಷ ಅದ್ದೂರಿಯಾಗಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕನ್ನಡದ ಬಗ್ಗೆ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿರುವ ಕನ್ನಡ ಅಭಿಮಾನಿ ಬಳಗದ ಕಾರ್ಯ ಶ್ಲಾಘನೀಯ’ ಎಂದರು.</p>.<p>ಸರ್ಕಾರಿ ಪ್ರೌಢಶಾಲೆಯಿಂದ ಪ್ರಮುಖ ರಸ್ತೆಗಳಲ್ಲಿ ಭುವನೇಶ್ವರಿ ಮೂರ್ತಿಯನ್ನು ಮೆರವಣಿಗೆ ಮಾಡಲಾಯಿತು.</p>.<p>ಮುಖಂಡರಾದ ಕಿರಲಿಂಗಪ್ಪ, ಯಮನಪ್ಪ ದಿನ್ನಿ, ಬಲವಂತರಾಯ ವಟಗಲ್, ಶಿವಣ್ಣ ವಕೀಲ, ಮಾಳಪ್ಪ ತೋಳ, ಚಾಂದಪಾಶಾ, ಸುರೇಶ ರಡ್ಡಿ, ಮಲ್ಲಿಕಾರ್ಜುನ ಗೌಡ, ಅಮರೇಶ ಕಟ್ಟಿಮನಿ, ರುಕ್ಮುದ್ದೀನ್, ಮೌನೇಶ ನಾಯಕ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>