ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸ್ಕಿ ಉಪ ಚುನಾವಣೆ: ಬಿಜೆಪಿಯ ಹಣ ಬಲಕ್ಕೆ ತಕ್ಕ ಉತ್ತರ -ಅಮರೇಗೌಡ ಬಯ್ಯಾಪುರ

Last Updated 2 ಮೇ 2021, 10:48 IST
ಅಕ್ಷರ ಗಾತ್ರ

ಮಸ್ಕಿ: ‘ಉಪ ಚುನಾವಣೆಯಲ್ಲಿ ಹಣ ಬಲದಿಂದ ಗೆಲ್ಲಲು ಹೊರಟಿದ್ದ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ’ ಎಂದು ಕಾಂಗ್ರೆಸ್‌ ಶಾಸಕ ಅಮರೇಗೌಡ ಬಯ್ಯಾಪುರ ಅಭಿಪ್ರಾಯಪಟ್ಟಿದ್ದಾರೆ.

ಮಸ್ಕಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಕಾರಣ ದೂರವಾಣಿ ಮೂಲಕ ‘ಪ್ರಜಾವಾಣಿ’ಗೆ ಪ್ರತಿಕ್ರಿಯೆ ನೀಡಿದ ಅವರು ‘ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಪ್ರತಾಪಗೌಡ ಪಾಟೀಲರನ್ನು ಉಪ ಚುನಾವಣೆಯಲ್ಲಿ ಗೆಲ್ಲಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಮಗ ವಿಜಯೇಂದ್ರನನ್ನು ಕಳುಹಿಸಿ ಹಣದ ಹೊಳೆ ಹರಿಸಿದರು. ಆದರೆ, ಮಸ್ಕಿಯ ಪ್ರಜ್ಞಾವಂತ ಮತದಾರರು ಹಣಬಲಕ್ಕೆ ಮಣೆ ಹಾಕದೆ ಮತ ನೀಡಿದ್ದಾರೆ’ ಎಂದರು.

‘ಆರ್. ಬಸನಗೌಡ ಮಸ್ಕಿ ಕ್ಷೇತ್ರದಲ್ಲಿ ಉತ್ತಮವಾಗಿ ಕೆಲಸ ಮಾಡಲಿದ್ದಾರೆ. ನಾನು ಸೇರಿ ಜಿಲ್ಲೆಯ ಎಲ್ಲ ಮುಖಂಡರೂ ಅವರಿಗೆ ಸಹಕಾರ ನೀಡುತ್ತೇವೆ’ ಎಂದು ಹೇಳಿದರು.

‘ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಸಹಕರಿಸಿದ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT