ಮೃತ ಕಾರ್ಮಿಕನ್ನು ಮೊಹಮ್ಮದ್ ದಾನೀಶ್ (34) ಎಂದು ಗುರುತಿಸಲಾಗಿದೆ. ರಾಯಚೂರು ತಾಲ್ಲೂಕಿನ ಚಂದ್ರಬಂಡಾ ಹೋಬಳಿಯ ರಸ್ತೆಯಲ್ಲಿ ಹಾಕಿದ ಶೆಡ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶುಕ್ರವಾರ ಶವ ಪತ್ತೆಯಾಗಿದೆ. ದಾನೀಶ್ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ ಎನ್ನಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.