ರಾಯಚೂರು: ನಗರದ ಹೊರವಲಯದ ತುಂಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯ ವಿಭಜಕಕ್ಕೆ ಶನಿವಾರ ಬೆಳಿಗ್ಗೆ ಬೈಕ್ ಡಿಕ್ಕಿಯಾಗಿ ಬೀದರ್ ಜಿಲ್ಲೆ ಹುಮನಾಬಾದ್ ತಾಲ್ಲೂಕು ಹುಡಗಿ ಗ್ರಾಮದ ವಿದ್ಯಾರ್ಥಿಗಳಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೈಕ್ ಮೇಲಿದ್ದ ಮೊಹಮ್ಮದ್ ಗೌಸ್ (25) ಹಾಗೂ ಅಜೇಯ್ (26) ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳ ಬಳಿ ಕಾಲೇಜು ಗುರುತಿನ ಚೀಟಿಗಳ ಆಧಾರದ ಮೇಲೆ ವಿಳಾಸ ಪತ್ತೆ ಮಾಡಲಾಗಿದೆ. ಆದರೆ, ಬೆಂಗಳೂರಿನಲ್ಲಿ ಬೈಕ್ ಖರೀದಿಯಾಗಿರುವುದುಫಲಕದಲ್ಲಿ ಸಂಖ್ಯೆಗಳಿವೆ.