ಪಟ್ಟಣದಲ್ಲಿ ಬೈಕ್ ಸೇರಿದಂತೆ ಇತರೆ ಬೆಲೆ ಬಾಳುವ ವಸ್ತುಗಳನ್ನು ಕದಿಯುವ ಚಾಳಿ ನಿರಂತರವಾಗಿ ನಡೆಯುತ್ತಿದೆ. ಶನಿವಾರ ರಾತ್ರಿ ಅಂಬೇಡ್ಕರ್ ವೃತ್ತದಲ್ಲಿರುವ ಮನೆಯ ಮುಂದೆ ನಿಲ್ಲಿಸಿದ ಬೈಕ್ನಿಂದ ಕಳ್ಳನೊಬ್ಬ ಪೆಟ್ರೋಲ್ ಕಳುವು ಮಾಡಿದ್ದಾನೆ. ಪಟ್ಟಣದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿ ರಾತ್ರಿ ಗಸ್ತು ಇದ್ದರೂ ಸಹ ಇಂತಹ ಘಟನೆಗಳು ಪಟ್ಟಣದಲ್ಲಿ ನಿರಂತರವಾಗಿ ನಡೆಯುತ್ತಿವೆ. ಕಳ್ಳರು ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಮದ್ಯವ್ಯಸನಿಗಳು ಹಣಕ್ಕಾಗಿ ಇಂತಹ ಕೃತ್ಯ ಮಾಡುತ್ತಿರುವುದು ಕಂಡುಬರುತ್ತದೆ.