ಮಸ್ಕಿ (ರಾಯಚೂರು ಜಿಲ್ಲೆ): ಬೈಕ್ ಹಿಂಬದಿ ಸವಾರ ಆಯತಪ್ಪಿ ಬಿದ್ದಾಗ ಲಾರಿ ಹರಿದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೇಡರ ಕಾರಲಕುಂಟಿ ಗ್ರಾಮದ ಬಳಿ ಶನಿವಾರ ನಡೆದಿದೆ.
ಲಿಂಗಸುಗೂರು ತಾಲ್ಲೂಕಿನ ಯರಗಂಟಿ ಗ್ರಾಮದ ಶಿವಗ್ಯಾನಪ್ಪ ತಳವಾರ (38) ಮೃತರು. ಬೈಕ್ ಸವಾರನಿಗೆ ಯಾವುದೇ ಗಾಯಗಳಾಗಿಲ್ಲ.
ಮಸ್ಕಿಯಿಂದ ಲಿಂಗಸುಗೂರಿಗೆ ಬೈಕ್ ಮೇಲೆ ತೆರಳುವಾಗ ಈ ಅಪಘಾತ ನಡೆದಿದೆ. ಪೋಲಿಸರು ಲಾರಿ ಶೋಧ ಆರಂಭಿಸಿದ್ದಾರೆ.
ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಎಸ್ ಸಿದ್ದರಾಮ ಬಿದರಾಣಿ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.