ರಾಯಚೂರು: ಕೊರೊನಾವೈರಸ್ ಸೋಂಕನ್ನು ತಡೆಗಟ್ಟುವ ನಿಮಿತ್ತ ಈಗಾಗಲೇ ಸರ್ಕಾರ ಹೊರಡಿಸಿದ ಆದೇಶವನ್ನು ಉಲ್ಲಂಘನೆ ಮಾಡಿ, ವಿನಾಕಾರಣ ರಸ್ತೆಯ ಮೇಲೆ ತಿರುಗಾಡುವವರ ಮೋಟಾರು ಸೈಕಲ್ ವಾಹನಗಳನ್ನು ಜಪ್ತಿ ಮಾಡಿ ಠಾಣೆಯಲ್ಲಿ ಇಡಲಾಗುವದು. ಯಾವುದೇ ಕಾರಣಕ್ಕೂ ಏಪ್ರಿಲ್ 14 ನೇ ತಾರೀಖಿನವರೆಗೆ ವಾಹನಗಳನ್ನು ಹಸ್ತಾಂತರಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.